ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿ ಶಾಸಕ ಲಕ್ಷ್ಮಣ ಸವದಿಯವರ 66ನೇ ಹುಟ್ಟುಹಬ್ಬ : ಐನಾಪೂರಲ್ಲಿ ಅಖಿಲ ಭಾರತ “ಎ” ಗ್ರೇಡ್ ಕಬಡ್ಡಿ ಕ್ರೀಡಾ ಮಹೋತ್ಸವ..!

ಬೆಳಗಾವಿ/ ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಜನಪ್ರಿಯ ಶಾಸಕ ಲಕ್ಷ್ಮಣ ಸವದಿಯವರ 66ನೇ ಜನ್ಮದಿನದ ಅಂಗವಾಗಿ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಅಖಿಲ ಭಾರತ “ಎ” ಗ್ರೇಡ್ ಪುರುಷರ ಕಬಡ್ಡಿ ಪಂದ್ಯಾವಳಿಗಳನ್ನು ಭರ್ಜರಿಯಾಗಿ ಆಯೋಜಿಸಲಾಗಿದೆ.

ಪಟ್ಟಣ ಪಂಚಾಯತ್ ಸದಸ್ಯ ಸಂಜಯ ಬಿರಡಿ ಅವರು ಐನಾಪೂರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಯುವ ನಾಯಕ ಚಿದಾನಂದ ಸವದಿ ಅವರ ಕಾಗವಾಡ ಮತಕ್ಷೇತ್ರದ ಅಭಿಮಾನಿಗಳ ಬಳಗದ ವತಿಯಿಂದ ಫೆಬ್ರವರಿ 15 ಮತ್ತು 16ರಂದು ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ಈ ಕ್ರೀಡಾ ಹಬ್ಬ ನಡೆಯಲಿದೆ ಎಂದರು.
ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಆಂಧ್ರಪ್ರದೇಶ, ತಮಿಳುನಾಡು, ಹಿಮಾಚಲ ಪ್ರದೇಶ, ಹರಿಯಾಣ, ರಾಜಸ್ಥಾನ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ 35ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿವೆ.
ಪ್ರೊ. ಕಬಡ್ಡಿಯ ಖ್ಯಾತ ಆಟಗಾರರು ಕಣಕ್ಕಿಳಿಯುತ್ತಿರುವುದು ಪಂದ್ಯಾವಳಿಯ ವಿಶೇಷ ಆಕರ್ಷಣೆಯಾಗಿದೆ.

ಫೆಬ್ರವರಿ 15ರಂದು ಸಂಜೆ 5 ಗಂಟೆಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಯುವ ಧುರೀಣ ಚಿದಾನಂದ ಸವದಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಪ್ಪು ಪೂಜಾರಿ ತಿಳಿಸಿದ್ದಾರೆ.

ಬಹುಮಾನ ವಿವರಗಳು ಹೀಗಿವೆ:
🥇 ಪ್ರಥಮ ಬಹುಮಾನ – ₹1,00,000
🥈 ದ್ವಿತೀಯ ಬಹುಮಾನ – ₹75,000
🥉 ತೃತೀಯ ಬಹುಮಾನ – ₹50,000
🏅 ಚತುರ್ಥ ಬಹುಮಾನ – ₹25,000
ಇದರ ಜೊತೆಗೆ ನಗದು, ಟ್ರೋಫಿ ಹಾಗೂ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ.
ಸರ್ವೋತ್ತಮ ರೈಡರ್ ಮತ್ತು ಸರ್ವೋತ್ತಮ ಕ್ಯಾಚರ್ ಪ್ರಶಸ್ತಿಗಳೂ ಇರಲಿವೆ.

ಪಾಲ್ಗೊಳ್ಳುವ ಎಲ್ಲಾ ತಂಡಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಕಲ್ಪಿಸಲಾಗಿದೆ. ಐನಾಪೂರದಲ್ಲಿ ನಡೆಯಲಿರುವ ಈ ಕ್ರೀಡಾ ಸಂಭ್ರಮ ಕಾಗವಾಡ ಕ್ಷೇತ್ರಕ್ಕೆ ಮತ್ತೊಂದು ಕ್ರೀಡಾ ಉತ್ಸವದ ಮೆರುಗು ನೀಡಲಿದೆ.

ಈ ಪಂದ್ಯಾವಳಿಯ ಮೂಲಕ ಲಕ್ಷ್ಮಣ ಸವದಿಯವರ ಜನ್ಮದಿನವನ್ನು ಕ್ರೀಡಾ ಉತ್ಸವವಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!