ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಯನ ರಂಗಮಂದಿರದಲ್ಲಿ ರಾಜ್ಯಮಟ್ಟದ ಕಲಾಪ್ರತಿಭೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ಶಿವರಾಜ್ ಎಸ್. ತಂಗಡಗಿಯವರು ಉದ್ಘಾಟಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪಕಟ್ಟಿ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಎಲ್. ಎನ್. ಮುಕುಂದರಾಜ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜಮೂರ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಶುಭಾ ಧನಂಜಯ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಪ. ಸ. ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಗೊಲ್ಲಹಳ್ಳಿ ಶಿವಪ್ರಸಾದ್ ರವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯ ಸಾಹಿತಿಗಳು, ಚಿಂತಕರು ಆದ ಶ್ರೀ ಕೋಟಗಾನಹಳ್ಳಿ ರಾಮಯ್ಯ ಅವರು ಹಾಗೂ ಖ್ಯಾತ ನೃತ್ಯ ಹಾಗೂ ಚಲನಚಿತ್ರ ಕಲಾವಿದರಾದ ಶ್ರೀಮತಿ ಯಮುನಾ ಶ್ರೀನಿಧಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.
ವರದಿ ಅಮರೇಶ ನಾಯಕ



















