ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ದಿನಾಂಕ: 18/02/2026 ರಂದು ಬುಧವಾರ ದಿವಸ ಹಿಂದೂ ಸಮ್ಮೇಳನ ಸಂಚಲನಾ ಸಮಿತಿ ವತಿಯಿಂದ ವಿರಾಟ ಹಿಂದೂ ಸಮ್ಮೇಳನ ಹಾಗೂ ಬೃಹತ್ ಶೋಭಾ ಯಾತ್ರೆಯ ಹಮ್ಮಿಕೊಳ್ಳಲಾಗಿದೆ.
ಈ ಸಮಾವೇಶದ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಭೀಮಾಶಂಕರ ಆಳೂರ ಹಾಗೂ ಆರ್ ಎಸ್ ಎಸ್ ಪ್ರಮುಖರಾದ ಸ್ವತಂತ್ರ ಸಿಂಧೆ ಮತ್ತು ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮೋಹನ್ ರಾಠೋಡ ಹಾಗೂ ಭೀಮಶಂಕರ್ ತೋಳನೂರ ಇವರೆಲ್ಲರೂ ಸೇರಿಕೊಂಡು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ನಾಯಕ ಸಿದ್ದರಾಯ ತೇಲಿ, ಮಹೇಶ್ ಪಾಟೀಲ್, ಬೆಳ್ಳು ಕ್ಷತ್ರಿ, ಭೀಮಾಶಂಕರ ವಾಗದುರಗಿ ಉಪಸ್ಥಿತರಿದ್ದರು.
ಅಗರಖೇಡ ಗ್ರಾಮದ ಸಮಸ್ತ ಹಿಂದೂ ಬಾಂಧವರು ಹಾಗೂ ತಾಯಂದಿರು, ಅಕ್ಕ ತಂಗಿಯರು ಹಾಗೂ ಅಣ್ಣ ತಮ್ಮಂದಿರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ವರದಿ ಮನೋಜ್ ನಿಂಬಾಳ



















