ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಶ್ರಮದಿಂದಲೇ ಸಾಧನೆ ಸಾಧ್ಯ : ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ

ಬಳ್ಳಾರಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕವಾಗಿ ಸದೃಢರಾಗುವ ಮೂಲಕ ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸಮಯ ಅಮೂಲ್ಯವಾಗಿದ್ದು, ಶಾಲಾ-ಕಾಲೇಜು ಮುಗಿದ ನಂತರವೇ ನಿಜವಾದ ಜೀವನ ಆರಂಭಗೊಳ್ಳುತ್ತದೆ. ಸಾಧಕರ ಜೀವನ ಶೈಲಿಗಳ ಮೂಲಕ ಪ್ರೇರಿತರಾಗಿ, ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧಕರಾಗಬೇಕು ಎಂದು ಹೇಳಿದರು.

ನಿಲಯ ವಿದ್ಯಾರ್ಥಿಗಳಿಗೆ ಸಮಯಾವಕಾಶ ಸಿಗಲಿದೆ. ಪಠ್ಯದ ಜೊತೆಗೆ ಸರ್ಕಾರಿ ಹುದ್ದೆಗಳ ನಿರ್ದಿಷ್ಟ ಪಠ್ಯಕ್ರಮಗಳ ಅಧ್ಯಯನ, ಗುಂಪು ಚರ್ಚೆ ಹಾಗೂ ಇತರೆ ಅಧ್ಯಯನ ನಡೆಸಬೇಕು. ಪದವಿ ನಂತರ ಸಾಕಷ್ಟು ಅವಕಾಶದ ಬಾಗಿಲು ತೆರೆಯುತ್ತವೆ. ಒಳ್ಳೆಯದ್ದನ್ನೇ ಆಯ್ಕೆ ಮಾಡಿಕೊಂಡು ಅವಕಾಶ ಉಪಯೋಗಿಸಿಕೊಳ್ಳಬೇಕು. ಕೇವಲ ಹಣ ಮಾಡಲು ಸರ್ಕಾರಿ ಹುದ್ದೆ ಪಡೆಯಬಾರದು ಸಾಮಾಜಿಕ ಸೇವೆ, ದೇಶಕ್ಕೆ ಕೊಡುಗೆ ನೀಡಬೇಕೆಂಬ ಪ್ರಾಮಾಣಿಕತೆ, ಹಣ ಸ್ಥಿರತೆ ಶೇ.99 ರಷ್ಟು ಕಠಿಣ ಪರಿಶ್ರಮ ಮತ್ತು ಶೇ.01 ರಷ್ಟು ಅದೃಷ್ಟದಿಂದ ಸಾಧನೆ ಸಾಧ್ಯ ಎಂದು ಕಿವಿ ಮಾತು ಹೇಳಿದರು.

ಬಳ್ಳಾರಿಯ ಜಿ. ಪಂ. ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಗಾರವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಲಾಗಿತ್ತು.

ವಿದ್ಯಾರ್ಥಿ ಜೀವನದಲ್ಲಿ ಸಮಯದ ಮಹತ್ವ ಅರಿತು ಮುನ್ನಡೆಯಲು ಸಲಹೆ.
ಪಠ್ಯದ ಜೊತೆಗೆ ಸರ್ಕಾರಿ ಹುದ್ದೆಗಳ ಪಠ್ಯಕ್ರಮ, ಗುಂಪು ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆಯನ್ನು ನೀಡಲಾಯಿತು.

ಕಷ್ಟದ ದಿನಗಳನ್ನು ಎದುರಿಸಿದಾಗ ಮಾತ್ರ ಸುಖದ ದಿನಗಳನ್ನು ಕಾಣಲು ಸಾಧ್ಯ ಎಂದರು.
ಜೆ.ಸಿ.ಮಂಜುನಾಥ ಬಳ್ಳೋಳ್ಳಿ, ಶೇಖರಪ್ಪ ಮತ್ತು ಡಾ.ಜಗದೀಶ್ ಬಸಾಪುರ ಅವರಿಂದ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಮಾತನಾಡಿ, ಜೀವನವೇ ಒಂದು ಸ್ಪರ್ಧೆ. ಆ ಸ್ಪರ್ಧೆಯಲ್ಲಿ ನಾವೆಲ್ಲಾ ಸ್ಪರ್ಧಾ ಆಕಾಂಕ್ಷಿಗಳು, ಜೀವನದಲ್ಲಿ ನಾವು ಏನಾಗಬೇಕು ಎಂಬುದನ್ನು ನಮ್ಮ ಸಾಮರ್ಥ್ಯದ ಮೂಲಕ ದೃಢ ನಿರ್ಧಾರದೊಂದಿಗೆ ಶ್ರದ್ದೆಯಿಂದ ಅಭ್ಯಾಸ ಮಾಡಿದಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮದ ಮೂಲಕ ಕಷ್ಟದ ದಿನಗಳನ್ನು ಎದುರಿಸಿದಾಗ ಮಾತ್ರ ಮುಂದೆ ಒಳ್ಳೆಯ ಸುಖದ ದಿನಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಶ್ರೀ ಮೇಧಾ ಡಿಗ್ರಿ ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಹಾಗೂ ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ, ಮಕ್ಕಳ ಸಲಹೆಗಾರ ಜೆ.ಸಿ.ಮಂಜುನಾಥ ಬಳ್ಳೋಳ್ಳಿ, ಬಳ್ಳಾರಿಯ ಭೀಮರಾವ್ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಟಡಿ ಸರ್ಕಲ್ ನ ನಿರ್ದೇಶಕ ಶೇಖರಪ್ಪ ಮತ್ತು ಸಂಡೂರು ಎಸ್.ಇ.ಎಸ್ ಶಿಕ್ಷಣ ಸಂಸ್ಥೆಯ ಡಾ. ಜಗದೀಶ್ ಬಸಾಪುರ ಅವರು ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿನೋದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ. ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!