ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಮಹರ್ಷಿ ವಾಲ್ಮೀಕಿ ಭವ್ಯ ಮಂದಿರ ಹಾಗೂ ಶ್ರೀಅನಂತೇಶ್ವರ ದೇವಾಲಯ ನಾಡಿಗೆ ಲೋಕಾರ್ಪಣೆ

ಯಾದಗಿರಿ ತಾಲೂಕಿನ ಮಗದಂಪೂರ್ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜಿಲ್ಲಾ ಅಧ್ಯಕ್ಷರಾದ ಮರೆಪ್ಪ ನಾಯಕ್ ಮಗದಂಪೂರ್ ಇವರು 70 ಲಕ್ಷ ರೂಪಾಯಿ ಸ್ವಂತ ಖರ್ಚಿನಲ್ಲಿ ಸಮಾಜದ ಏಳ್ಗೆಗಾಗಿ ಮತ್ತು ಸಮಾಜದ ಒಳಿತಿಗಾಗಿ ಇವರ ಪರಿಶ್ರಮದಿಂದ ಇಂದು ಮಗದಂಪೂರ್ ದಲ್ಲಿ ಮಹರ್ಷಿ ವಾಲ್ಮೀಕಿಯ ಭವ್ಯ ಮಂದಿರವನ್ನು ನಿರ್ಮಾಣ ಮಾಡಿರುತ್ತಾರೆ.ಮಹಾ ಶಿವರಾತ್ರಿ ದಿನದಂದು ವಾಲ್ಮೀಕಿ ಸಮುದಾಯದ ಮುಖಂಡರು ಒಂದುಗೂಡಿ ಮಾರ್ಚ್ 2 ನೇ ತಾರೀಕಿನಂದು ಶ್ರೀ ಮಹರ್ಷಿ ವಾಲ್ಮೀಕಿಯ ಮಂದಿರವನ್ನು ಹಾಗೂ ಶ್ರೀ ಅನಂತೇಶ್ವರ ದೇವಾಲಯವನ್ನು ಲೋಕಾರ್ಪ್ರಣೆ ಮಾಡಲಾಗುವುದು ಎಂದು ಹೇಳಿದರು. ಈ ಭವ್ಯ ಮಂದಿರವು ಮಗದಂಪೂರ್ ಬೆಟ್ಟದ ಮೇಲೆ ಅತ್ಯಂತ ಸುಂದರವಾಗಿ ನಿರ್ಮಿಸಲಾಗಿದೆ ತಾವೆಲ್ಲರೂ ಈ ಲೋಕಾರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಸಮಾಜದ ಎಲ್ಲಾ ಮುಖಂಡರಿಗೆ ಕೇಳಿ ಕೊಳ್ಳುತ್ತೇವೆ. ಮರೆಪ್ಪ ನಾಯಕ್ ಮಗದಂಪೂರ್ ಹಾಗೂ ವಾಲ್ಮೀಕಿ ಸಮಾಜದ ಅಧ್ಯಕರಾದ ಗೌಡಪ್ಪಗೌಡ ಆಲ್ದಾಳ, ಹಣುಮಂತ ದೊರೆ ಟೋಕಾಪುರ, ರಾಜ್ಯದ ಎಲ್ಲಾ ಗೌರವಾನ್ವಿತ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ