ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದರಾಮಯ್ಯ ಹಿಂದೂ ವಿರೋಧಿಗಳಲ್ಲ:ಚಾಮರಾಜನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್

ಹನೂರು: ಸಿದ್ದರಾಮಯ್ಯ ಹಿಂದೂ ವಿರೋಧಿಗಳಲ್ಲ, ಪಟ್ಟಣದಲ್ಲಿ ಚಾಮರಾಜನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್ ತಿಳಿಸಿದರು

ಟಿಪ್ಪು ವಿಗೆ ಹೋಲಿಕೆ ಮಾಡಿಕೊಂಡು ಟಿಪ್ಪುವಿಗೆ ಹೊಡೆದಾಗೆ ಸಿದ್ದರಾಮಯ್ಯರವರಿಗೂ ಹೊಡೆಯಬೇಕು ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿರುದ್ಧ ರಾಮಪುರ ಹಾಗೂ ಹನೂರು ಬ್ಲಾಕ್ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನೆಡೆಸಿ ಅವರು ಮಾತನಾಡಿದರು

ಈಗಾಗಲೇ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಟಿಪ್ಪುವಿಗೆ ಹೋಲಿಕೆ ಮಾಡಿ ಸಿದ್ದರಾಮಯ್ಯ ವಿರುದ್ಧವಾಗಿ ಮಾತನಾಡಿರುವ ಬಿಜೆಪಿ ಪಕ್ಷದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿರುದ್ದ ಪಟ್ಟಣದ ತಾಲ್ಲೂಕು ಕಛೇರಿ ವೃತ್ತದಲ್ಲಿ ಅಶ್ವಥ್ ನಾರಾಯಣ ಭಾವಚಿತ್ರವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಸದಸ್ಯರು ಬಿಜೆಪಿ ಪಕ್ಷ ಹಾಗೂ ಅಶ್ವಥ್ ನಾರಾಯಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಿಕ್ಕಾರ ಕೂಗಿದರು

ಈ ಸಂಧರ್ಭದಲ್ಲಿ ಮಾತನಾಡಿದ್ದ ಅವರು ರಾಜ್ಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿ ಇರುವ ಬಿಜೆಪಿ ಪಕ್ಷದ ಸಚಿವರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದೆ ಕೋಮು ಸೌಹಾರ್ದತೆಗೆ ದಕ್ಕೆ ತರುತ್ತಾ ಇದ್ದಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಯಾವುದೇ ಕಾರಣಕ್ಕೂ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿಲ್ಲ ಹಾಗೂ ಅವರು ಹಿಂದೂ ವಿರೋಧಿಗಳಲ್ಲ ಅವರ ಜನಪ್ರಿಯತೆ ಸಹಿಸಿಕೊಳ್ಳದೆ ಈ ರೀತಿ ಹೇಳಿಕೆಗಳನ್ನು ನೀಡುತ್ತಾ ಇದ್ದಾರೆ, ರಾಜಕೀಯ ದುರುದ್ದೇಶದಿಂದ ಇವರ ಬೆಳೆ ಬೇಯಿಸಿಕೊಳ್ಳಲು ಅಲ್ಪ ಸಂಖ್ಯಾತರನ್ನೇ ಗುರಿ ಮಾಡಿಕೊಂಡು ಹೇಳಿಕೆ ನೀಡುತ್ತಾ ಇದ್ದಾರೆ ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಒಂದೇ ಆದರೆ ಈ ವ್ಯಕ್ತಿ ರಾಜ್ಯದಲ್ಲಿ ಕೋಮುವಾದ ಕಿಡಿ ಹಚ್ಚಲು ಪ್ರಯತ್ನ ಮಾಡುತ್ತಿದ್ದಾರೆ, ಇದನ್ನ ಇಲ್ಲಿಗೆ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದರು

ಈ ಸಂಧರ್ಭದಲ್ಲಿ ಹನೂರು ಯುವ ಬ್ಲಾಕ್ ಅಧ್ಯಕ್ಷ ಮಾದೇಶ್ ರಾಮಪುರ ಯುವ ಬ್ಲಾಕ್ ಅಧ್ಯಕ್ಷ ಸುರೇಶ್, ಪಟ್ಟಣದ ಯುವ ಅಧ್ಯಕ್ಷ ಮಂಜೇಶ್ ಹಾಗೂ ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ