ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ
ಬೆನಕನಹಳ್ಳಿ(ಜೆ) ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಅಧ್ಯಕ್ಷರನ್ನಾಗಿ ಶಿವಪ್ಪ ಅಮ್ಮಾಪುರ ಹಾಗೂ ಉಪಾಧ್ಯಕ್ಷರನ್ನಾಗಿ ಸಿದ್ದಪ್ಪ ಹೊತಿನಮಡ್ಡಿ ಅವರನ್ನು ಆಯ್ಕೆ ಮಾಡಲಾಯಿತು.
ಶಾಲಾ ಮೇಲುಸ್ತುವಾರಿ ನಿಯಮದಂತೆ ಉಳಿದ 16 ಜನರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಈಶ್ವರ ಶಹಪುರಕರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಂಡೆಪ್ಪಗೌಡ, ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಣ್ಣ ಹೋತಿನಮಡ್ಡಿ ಸೇರಿದಂತೆ ಬೆನಕನಹಳ್ಳಿ(ಜೆ) ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಇತರರು ಇದ್ದರು.
- ಕರುನಾಡ ಕಂದ ಪತ್ರಿಕೆ



















