ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣಾ ಹಾಗೂ ಔಷಧ ವಿತರಣಾ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಗಿಡಮೂಲಿಕೆ ಔಷಧಿಗಳಿಂದ ಯಾವುದೇ ಅಡ್ಡ ಪರಿಣಾಮ ಇಲ್ಲದೇ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೈಹಿಕ ಆರೋಗ್ಯಕ್ಕೆ ಯೋಗ ವ್ಯಾಯಾಮ, ಮಾನಸಿಕ ಸ್ವಾಸ್ಥ್ಯಕ್ಕೆ ಧ್ಯಾನ ಪ್ರಾರ್ಥನೆ ಸಹಾಯಕ ಎಂದು ಬಿಎಸ್‌ವಿ ಸಂಸ್ಥೆಯ ಅಧ್ಯಕ್ಷ ಕಲ್ಗುಡಿ ವಿಶ್ವನಾಥ ಹೇಳಿದರು.
ಸ್ಥಳೀಯ ಭಾರತೀಯ ಶಿಶು ವಿದ್ಯಾಲಯ ಆವರಣದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಆಯುಷ್ಮಾನ್ ಆರೋಗ್ಯ ಮಂದಿರ ಮತ್ತು ಗಂಗಾವತಿಯ ಸುಲೋಚಿನ ಆಯುಷ್ ಥೆರೇಫಿ ಸೆಂಟರ್ ಸಹಯೋಗದಲ್ಲಿ ಉಚಿತ ಅರೋಗ್ಯ ತಪಾಸಣಾ ಹಾಗೂ ಔಷಧ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಕೃತಿಯ ಮಡಿಲಿಗೆ ಹೋದಾಗ ತಾಯಿಯ ಮಡಿಲಿಗೆ ಸೇರಿದಂತೆ ಅನುಭವವಾಗಿ ನಮ್ಮಲ್ಲಿರುವ ಋಣಾತ್ಮಕ ಅಂಶಗಳು, ಮತ್ತು ಖಿನ್ನತೆ ದೂರವಾಗಿ ಧನಾತ್ಮಕ ಚಿಂತನೆ ನಮ್ಮ ಮಾನಸಿಕ ಸ್ಥಿರತೆ ಹೆಚ್ಚಿಸುತ್ತದೆ. ಅತಿಯಾದ ಔಷಧಿಗಳ ಸೇವನೆಯಿಂದ ದೇಹ ಪ್ರಕೃತಿದತ್ತವಾದ ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತದೆ, ಅಡುಗೆ ಮನೆಯಲ್ಲೇ ಔಷಧಿಗಳಿವೆ, ಮಹಿಳೆ ಸಂಸಾರದ ಜಂಜಾಟಗಳ ಮಧ್ಯೆ ತನ್ನ ಆರೋಗ್ಯ ಅಲಕ್ಷ್ಯ ಮಾಡಬಾರದು ಎಂದರು.
ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಪ್ರಹ್ಲಾದ್ ಐಲಿ ಪ್ರಾಸ್ತಾವಿಕ ಮಾತನಾಡಿ, ಸಮಸ್ಯೆಗಳನ್ನು ಇತರರೊಡನೆ ಹಂಚಿಕೊಳ್ಳಬಹುದು. ಆದರೆ ಅನಾರೋಗ್ಯವನ್ನು ನಾವೇ ಅನುಭವಿಸಬೇಕು. ನೈಸರ್ಗಿಕ ಆಹಾರ ಸೇವನೆ, ಪ್ರಕೃತಿಯ ಮಡಿಲಲ್ಲಿ ಜೀವನ, ನಿಗದಿತ ಋತುವಿನಲ್ಲಿ ಗಿಡಮೂಲಿಕೆಗಳಿಂದ ಸಿದ್ಧಪಡಿಸಿದ ಆರೋಗ್ಯಕ್ಕಾಗಿ ಕಷಾಯ ಸೇವನೆ ಮಾಡಿ ಸದೃಢರಾಗಿರುತ್ತಾರೆ. ಆಯುಷ್ ಪದ್ಧತಿಯನ್ನು ಮುಖ್ಯವಾಹಿನಿಗೆ ತಂದು ಆರೋಗ್ಯವಂತ ಸಮಾಜ ನಿರ್ಮಾಣ ಆಯುಷ್ ಶಿಬಿರದ ಉದ್ದೇಶವಾಗಿದೆ. ಆಯುಷ್ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದರು.
ಈ ಸಂದರ್ಭದಲ್ಲಿ 160 ಜನ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಬಿಎಸ್‌ವಿ ಶಾಲೆಯ ಜಿ.ವಾದಿರಾಜರಾವ್, ಮುಖ್ಯಗುರು ಶಾಮ್‌ಸುಂದರ್, ವೈದ್ಯಾಧಿಕಾರಿಗಳಾದ ಡಾ.ಕೆ.ಶ್ರೀದೇವಿ, ಡಾ.ನಾಗರಾಜ ಬಿ ಗುಂಡ್ಲನೂರು, ಆಯುಷ್ ಇಲಾಖೆಯ ಸಿಬ್ಬಂದಿಗಳಾದ ಶಂಕ್ರಮ್ಮ, ಸೌಮ್ಯ, ಗಂಗಾಧರ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!