ಕಲಬುರಗಿ : ಮಾಚ್೯ 12 ರಂದು “ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ’ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅವರು ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಇರುವ ನಿಸ್ವಾರ್ಥ ಸಮಾಜದ ಸೇವಕ- ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್. ಆಯ್ಕೆಯಾಗಿದ್ದಾರೆ. ಇದೇ
ಮಾಚ್೯ – ೧೫ ರಂದು ರವಿವಾರ ದಿನದಂದು ಡಾ.ಅಂಬೇಡ್ಕರ್ ಸಭಾ ಭವನ ಯಲಹಂಕ ಬೆಂಗಳೂರಿನಲ್ಲಿ ಟಿವಿ-೪ ಸುದ್ದಿ ವಾಹಿನಿ, ಶ್ರೀ ಶಿರಡಿ ಸಾಯಿದೀಪ ಮೀಡಿಯಾ ಬ್ರಾಡ್ ಕಾಸ್ಟಿಂಗ್ ಸರ್ವಿಸಸ್ ಶ್ರೀ ಶಿರಡಿ ಸಾಯಿ ದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸುಮಾರು 1850 ಕ್ಕೊ ಹೆಚ್ಚು ಜನತೆಗೆ ಉಚಿತವಾಗಿ (ಕ್ಷೌರ) ಸೇವೆ ಸಲ್ಲಿಸಿದ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರಿಗೆ ಈ ವರ್ಷ ಕೊಡುಮಾಡುವ “ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ, TV-4 ಕನ್ನಡ ಸುದ್ದಿವಾಹಿನಿ ಮಾಲೀಕರು ಮತ್ತು ಸಂಸ್ಥಾಪಕ ಅಧ್ಯಕ್ಷರು ಶ್ರೀ ಶಿರಡಿ ಸಾಯಿ ದೀಪ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರಾದ ಡಾ. ಸಾಯಿ ಸತೀಶ ತೋಟಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















