ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು : ಎ.ಎಸ್. ಭೂಮೇಶ್ವರ

ಬಳ್ಳಾರಿ / ಕಂಪ್ಲಿ: ತಾಲೂಕಿನ ಗೋನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗೇನಹಳ್ಳಿ ಮತ್ತು ಮೆಟ್ರಿ ಸಮೂಹ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಿದ್ದ ಎಫ್‌ಎಲ್‌ಎನ್ ಆಧರಿತ ಕಲಿಕಾ ಹಬ್ಬ ಗುರುವಾರ ಜರುಗಿತು.
ಎಸ್ಡಿಎಂಸಿ ಅಧ್ಯಕ್ಷ ಸರ್ಧಾರ್ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಪ್ರತಿಯೊಂದು ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು. ಕಲಿಕಾ ಹಬ್ಬವೂ ಹಿಂದುಳಿದ ಮಕ್ಕಳನ್ನು ಗುರುತಿಸಿ, ಕಲಿಕೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.
ಸಿಆರ್‌ಪಿ ಎ.ಎಸ್.ಭೂಮೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಗುಣ ಮತ್ತು ಕಲೆಯನ್ನು ಹೊರಗೆಳೆಯಲು ಪೂರ್ವತಯಾರಿ ನಡೆಸುವ ಹಬ್ಬವೇ ಕಲಿಕಾ ಹಬ್ಬ. ಕಲಿಕಾ ಹಬ್ಬವು ಮಕ್ಕಳಲ್ಲಿರುವ ವಿವಿಧ ಬಗೆಯ ಪ್ರತಿಭೆಯ ಸಾಮರ್ಥ್ಯವನ್ನು ಪ್ರಸ್ತುತಪಡಿಸಲು ಅವಕಾಶ ಮಾಡಿಕೊಡುತ್ತದೆ. ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡುತ್ತದೆ. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದೆ. ಇದರಿಂದ ಹೊಸ ಹೊಸ ಬಗೆಯ ಪಠ್ಯೇತರ ಚಟುವಟಿಕೆಯನ್ನು ಮಗು ಕಲಿಯಲು ಸಾಧ್ಯವಾಗುತ್ತದೆ. ಮಗುವಿನಲ್ಲಿ ಗುಪ್ತವಾಗಿರುವ ಜ್ಞಾನವನ್ನು ಚಟುವಟಿಕೆಯ ಮೂಲಕ ಹೊರ ತರಲು ಸಾಧ್ಯ ಎಂದರು.
ನಂತರ ನಲಿಕಲಿ ಕೊಠಡಿಯಲ್ಲಿ ಏಳು ಕಲಿಕಾ ಚಟುವಟಿಕೆಗಳನ್ನೊಳಗೊಂಡ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ದೊರಯಿತು. ಎಸ್ ಡಿ ಎಂ ಸಿ ಯವರು, ಮುಖ್ಯಗುರುಗಳು, ಶಿಕ್ಷಕಕರು, ಪೋಷಕರು ಮಕ್ಕಳ ಕಲಿಕಾ ಚಟುವಟಿಕೆಗಳನ್ನು ವೀಕ್ಷಿಸಿ ಸೈ ಎಂದರು. ನಂತರ ವಿಭಿನ್ನವಾಗಿ ಕಲಿಕಾ ಚಟುವಟಿಕೆಯೊಂದಿಗೆ ವಿಜೇತರಾದ ಮಕ್ಕಳಿಗೆ ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಎಚ್.ಪಿ.ಸೋಮಶೇಖರ, ಮಲ್ಲಿಕಾರ್ಜುನ, ಶೇಖರ, ಮಾಲಿಕ್, ಗೋಣಿ ಬಸಪ್ಪ, ವೀರೇಶ, ರವಿಕುಮಾರ, ಮಡಿವಾಳಪ್ಪ, ಮಂಜುನಾಥ, ಉಷಾರಾಣಿ, ರೇಖಾ, ಅನುಸೂಯ, ಬಹುತ್ವ ಪ್ರತಿಷ್ಠಾನ ಎನ್‌ಜಿಒ ಸಂಸ್ಥೆಯ ಸದಸ್ಯ ಅಖಿಲೇಶ ಸೇರಿದಂತೆ ಶಿಕ್ಷಕ ವೃಂದದವರು, 19 ಶಾಲೆಗಳ ಮಕ್ಕಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!