ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ : ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ : ಯುಗಾದಿ, ರಂಜಾನ್ ಸೌಹಾರ್ದದಿಂದ ಆಚರಿಸಲು ಸಲಹೆ

ಕಂಪ್ಲಿ : ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ ತಿಳಿಸಿದರು.
ರಂಜಾನ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಪಟ್ಟಣದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳಿಗೆ ಯುಗಾದಿ ಹಾಗೂ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಪವಿತ್ರ ಹಬ್ಬಗಳಾಗಿವೆ ಎರಡೂ ಹಬ್ಬಗಳನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೇ ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸಬೇಕು ಎಂದರು.

ಹಬ್ಬದ ವೇಳೆ ಯುವಕರು ಸಂಚಾರ ನಿಯಮ ಉಲ್ಲಂಘಿಸದೇ, ನಿಯಮಾನುಸಾರ ವಾಹನ ಚಲಾಯಿಸಬೇಕು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಒಟ್ಟಾರೆ ಹಬ್ಬಗಳು ಶಾಂತಿ, ಸುವ್ಯವಸ್ಥಿತವಾಗಿ, ಸಾಮರಸ್ಯದಿಂದ ಆಚರಿಸಬೇಕೆಂಬುದೇ ಸಭೆಯ ಉದ್ದೇಶ ಎಂದು ಪಿ ಐ ವಾಸುಕುಮಾರ ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಂ. ಹೇಮಯ್ಯಸ್ವಾಮಿ, ಎಪಿಎಂಸಿ ಅಧ್ಯಕ್ಷ ಎನ್. ಹಬೀಬಿ ರೆಹಮಾನ್, ಉಸ್ಮಾನ್, ಮಸ್ತಾನವಲಿ ಕಡಪ, ಮೈಮೂದಸಾಬ್, ವಾಹಿದ್ ಸಾಬ್, ಕರೆಕಲ್ ಮನೋಹರ್, ಕೆ.ಎಲಿಗಾರ ನಾಗರಾಜ್, ಮೆಹೆಬೂಬ್, ಸುದರ್ಶನ್ ರೆಡ್ಡಿ ಪತ್ರಯ್ಯಸ್ವಾಮಿ, ಮೌಲಾಹುಸೇನ್, ನಾವಾಬ್ ಸಾಬ್, ಸತ್ಯಪ್ಪ, ಹೊನ್ನೂರಸಾಬ್,
ಸರ್ವ ಧರ್ಮದ ಮುಖ್ಯಸ್ಥರು ಹಾಗೂ ವಿವಿಧ ಸಂಘ
ಸಂಸ್ಥೆಗಳ ಮುಖಂಡರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!