ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಜನಸಾಗರ ಮಧ್ಯೆದಲ್ಲಿಯೆ ಅದ್ದೂರಿಯಾಗಿ ಜರುಗಿತು
ಬೆಳಗಿನ ಜಾವ ಗುಡ್ಡದಲ್ಲಿರುವ ಶ್ರೀ ರಾಮಲಿಂಗೇಶ್ವರ ಮೂರ್ತಿಗೆ ವಿಶೇಷವಾಗಿ ಅಭಿಷೇಕ ಮಾಡಲಾಯಿತು.
ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್ ಅವರ ಮನೆಯಿಂದ ರಥೋತ್ಸವಕ್ಕೆ ಕುಂಭವನ್ನು ಸಮರ್ಪಣೆ ಮಾಡಲಾಯಿತು. ಅವರ ಮನೆಯಿಂದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಕಳಸವನ್ನು ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ, ಪೂಜ್ಯಶ್ರೀ ಮ. ನಿ. ಪ್ರ. ಚಿಕ್ಕ ಗುರು ನಂಜೇಶ್ವರ ಮಹಾಸ್ವಾಮಿಗಳು ಭರತನೂರ್ ಮತ್ತು ಪೂಜ್ಯಶ್ರೀ ಷ .ಬ್ರ ಬಸವಲಿಂಗ ಶಿವಾಚಾರ್ಯರು ಹಿರೇಮಠ ಕೋಡ್ಲಿ ಇವರುಗಳ ಸಾನಿಧ್ಯದಲ್ಲಿ ಶ್ರೀ ರಾಮಲಿಂಗೇಶ್ವರ ರಥೋತ್ಸವ ದಿನಾಂಕ 02 . 04. 2026ರಂದು ಸಾಯಂಕಾಲ 7: 30 ಗಂಟೆಗೆ ತೇರಿಗೆ ಖಾರಿಕ, ಬಾದಾಮಿ, ಉತ್ತತ್ತಿ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತ ಜನ ಸಾಗರ ಮಧ್ಯದಲ್ಲಿಯೆ ಶ್ರೀ ರಾಮಲಿಂಗೇಶ್ವರ ಮಹಾರಾಜ ಕಿ ಜೈ ಎಂಬ ಘೋಷಣೆಯನ್ನು ಕೂಗುತ್ತಾ ಅದ್ದೂರಿಯಾಗಿ ರಥೋತ್ಸವ ಕಾರ್ಯಕ್ರಮವು ಜರುಗಿತು.
ಈ ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್, ರಾಜಕೀಯ ಗಣ್ಯರು, ಊರಿನ ಪ್ರಮುಖರು, ಹಿರಿಯರು, ಯುವಕರು, ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಕೋಡ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ ಚಂದ್ರಶೇಖರ್ ಆರ್. ಪಾಟೀಲ್




















