ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ : ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇಲ್ಲಿನ ಸಿದ್ದಾರ್ಥ್ ನಗರದಲ್ಲಿರುವ ಶಿವಣ್ಣ ಅವರ ಮನೆ ಹಾಗೂ ಅವರ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದೆ.

ಅಕ್ರಮ ಆಸ್ತಿ ಪತ್ತೆ:
ಶಿವಣ್ಣ ಅವರ ಸಿದ್ಧಾರ್ಥ ನಗರದ ನಿವಾಸ ಮತ್ತು ಕಚೇರಿ ಸೇರಿದಂತೆ ನಾಲ್ಕು ಸ್ಥಳಗಳಲ್ಲಿ ನಡೆದ ಶೋಧನೆಯಲ್ಲಿ ನಗದು, ಚಿನ್ನಾಭರಣ ಮತ್ತು ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ವಸ್ತುಗಳು:
ಸುಮಾರು 8.5 ಲಕ್ಷ ರೂ. ನಗದು.
ಸುಮಾರು 600 ಗ್ರಾಂ ಚಿನ್ನಾಭರಣ.
3 ದ್ವಿಚಕ್ರ ವಾಹನಗಳು.
ಬಳ್ಳಾರಿ ನಗರದಲ್ಲಿ 14 ವಸತಿ ನಿವೇಶನಗಳು ಮತ್ತು 3 ಮನೆಗಳಿಗೆ ಸಂಬಂಧಿಸಿದ ದಾಖಲೆಗಳು ಲಭಿಸಿವೆ.
ತನಿಖೆ: ಬೇನಾಮಿ ಆಸ್ತಿಗಳ ಬಗ್ಗೆಯೂ ದಾಖಲೆಗಳು ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!