ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದ್ವಿತೀಯ ಪಿಯುಸಿ ಫಲಿತಾಂಶ : ಧ್ವನಿ ಕುಲಕರ್ಣಿ ವಾಣಿಜ್ಯ ವಿಭಾಗಕ್ಕೆ ರಾಜ್ಯಕ್ಕೆ ಎರಡನೆಯ ಸ್ಥಾನ.

ಬೆಳಗಾವಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಹೊರಹೊಮ್ಮಿದ ಕನಸು ಇಂದು ಸಾಧನೆಯ ಶಿಖರ ತಲುಪಿದೆ.

ಕಾಮರ್ಸ್ ವಿಭಾಗದಲ್ಲಿ 600ಕ್ಕೆ 599 ಅಂಕಗಳನ್ನು ಪಡೆದು, ರಾಜ್ಯಕ್ಕೆ ಎರಡನೆಯ ಸ್ಥಾನ ಪಡೆದು ವಿದ್ಯಾರ್ಥಿನಿ ಅಪೂರ್ವ ಸಾಧನೆ ಮೆರೆದಿದ್ದಾರೆ.

ನಗರದ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಧ್ವನಿ ಸಂತೋಷ್ ಕುಲಕರ್ಣಿ ಕೂಡ 599 ಅಂಕಗಳನ್ನು ಪಡೆದು ತನ್ನ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.
ಪರಿಶ್ರಮಕ್ಕೆ ಸದಾ ಫಲ ಸಿಗುತ್ತದೆ ಎಂಬುದನ್ನು ಮತ್ತೊಮ್ಮೆ ಅವರು ತೋರಿಸಿದ್ದಾರೆ.

ಇಂಗ್ಲಿಷ್ ವಿಷಯದಲ್ಲಿ 100ಕ್ಕೆ 99 ಅಂಕಗಳನ್ನು ಪಡೆದು, ಉಳಿದ ವಿಷಯಗಳಲ್ಲಿ ಶತಕಗಳ ಸುರಿಮಳೆಯನ್ನೇ ಸುರಿಸಿದ ವಿದ್ಯಾರ್ಥಿನಿ ತಮ್ಮ ಪ್ರತಿಭೆಯಿಂದ ಮಿಂಚಿದ್ದಾರೆ.

ಒಟ್ಟಿನಲ್ಲಿ, ಈ ವರ್ಷದ ಫಲಿತಾಂಶ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳ ಪರಿಶ್ರಮ, ತ್ಯಾಗ ಮತ್ತು ಕನಸುಗಳ ಗೆಲುವಿನ ಕಥೆಯಾಗಿದ್ದು, ಜಿಲ್ಲೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡಿದೆ.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!