ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಕ್ರಾಸಿನಲ್ಲಿರುವ ಕುವೆಂಪು ವಿದ್ಯಾಸಂಸ್ಥೆಯ ಎಮ್. ಎಮ್. ಎಸ್. ಎ ಪದವಿ ಪೂರ್ವ ಕಾಲೇಜು ಈ ವರ್ಷದ ಪಿಯುಸಿ ಫಲಿತಾಂಶಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೯೬ ವಿದ್ಯಾರ್ಥಿಗಳು ಶೇ ೧೦೦ ಫಲಿತಾಂಶ ಸಾಧಿಸಿದ್ದು, ಒಬ್ಬರೂ ಅನುತ್ತೀರ್ಣರಾಗಿಲ್ಲವೆಂಬುದು ವಿಶೇಷವಾಗಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸುಧಾ ವಜ್ಜಲ ೯೭% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಸಲ್ಮಾ ಶೇಖ್ ೯೭% ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಸೋಪಿಸಾಬ್ ೯೬% ಅಂಕಗಳೊಂದಿಗೆ ತೃತೀಯ ಸ್ಥಾನ ತೆಗೆದುಕೊಂಡಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಅಭಿಷೇಕ್ ಬಿರಾದಾರ್ ೯೬% ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ, ವಿನಯ್ ತಿವಾರಿ ೯೪.೧೬% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಪ್ರಿಯಾಂಕ ಪಟೇದಾರ್ ೯೩.೧೬% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಅಕ್ಷತಾ ಸಜ್ಜನ್ ೮೯ % ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಬ್ದುಲ್ ಮಜೀದ್ ೮೪% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಭರತ್ ಕುಮಾರ್ ಮದರಿಮಠ ೮೪% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ವರದಿ ಸಂಗಮೇಶ ಸಿ.ಚೌದ್ರಿ




















