ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಣೆಯಾದ ಧರ್ಮಚಕ್ರಗಳ ಅಳವಡಿಕೆಗೆ ಮನವಿ

ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕಚೇರಿಯ ಪಕ್ಕದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಅಳವಡಿಸಿರುವ ಸ್ತೂಪದಲ್ಲಿ
ಬೌದ್ಧ ಧರ್ಮ ಸ್ವೀಕಾರ ಮಾಡಿರುವ ಅಂಬೇಡ್ಕರ್ ಅವರ ಸ್ತೂಪದಲ್ಲಿ ಧರ್ಮ ಚಕ್ರಗಳೇ ಕಾಣೆಯಾಗಿವೆ ಹಾಗೂ ಅರಳಿ ಮರದ ಎಲೆಗಳು ಕೈ ಬಿಟ್ಟಿರುವುದು ಮತ್ತೆ ಅವರನ್ನು ಹಿಂದೂ ಧರ್ಮಕ್ಕೆ ತಳ್ಳಲ್ಪಡುತ್ತಿದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮವನ್ನು ಸ್ವೀಕಾರ ಮಾಡಿ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಅವರು ಇರುವ ಜಾಗವನ್ನೆಲ್ಲಾ ಬೌದ್ಧ ಧರ್ಮವಾಗಿ ಪರಿವರ್ತನೆ ಮಾಡಿಕೊಂಡು ಜೀವನವನ್ನು ನಡೆಸುತ್ತಿದ್ದರು. ಆದರೆ ನಮ್ಮಗಳ ತಿಳುವಳಿಕೆ ಮಟ್ಟ ಕುಗ್ಗಿರುವುದರಿಂದ ನಮಗೆ ಅವರ ಅನುಸರಣೆ ತಿಳಿಯುತ್ತಿಲ್ಲ ಈಗಲಾದರೂ ನಾವು ಎಚ್ಚೆತ್ತುಕೊಂಡು ಅವರು ಇರುವ ಜಾಗದಲ್ಲಿ ಬೌದ್ಧ ಧರ್ಮದ ಧರ್ಮ ಚಕ್ರ ಹಾಗೂ ಅರಳಿ ಮರದ ವಿಶೇಷ ಎಲೆಯ ಚಿತ್ರಗಳು ಅಥವಾ ಅರಳಿ ಮರದ ಚಿತ್ರಗಳನ್ನು ಕೂಡ ಬರೆಸುವುದು ನಮ್ಮ ಜವಾಬ್ದಾರಿಯಾಗಿದೆ ದಯವಿಟ್ಟು ಯಾರೂ ತಪ್ಪಾಗಿ ತಿಳಿದುಕೊಳ್ಳಬೇಡಿ ಅವರ ಮಾರ್ಗವನ್ನು ಅನುಸರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ ಹಾಗಾಗಿ ಮುಂದಿನ ದಿನಗಳಲ್ಲಿ ಅರಕಲಗೂಡಿನ ತಾಲೂಕು ಕಚೇರಿಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ತೂಪದಲ್ಲಿ ಧರ್ಮ ಚಕ್ರಗಳನ್ನು ಅಳವಡಿಸಬೇಕಾಗಿ ಕೇಳಿಕೊಳ್ಳುತ್ತೇನೆ.

  • ಸುಧೀಂದ್ರ ಡಿ. ಅರಕಲಗೂಡು
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!