ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸೂರಿನ ಗಾಡಿಕೇರಿ ಓಣಿಯಲ್ಲಿ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಆಚರಣೆ

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕಿನ ಹೊಸೂರ ಗ್ರಾಮದ ಗಾಡಿಕೇರಿ ಓಣಿಯಲ್ಲಿ ದಿನಾಂಕ 14-04-2026ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.
ಗ್ರಾಮಸ್ಥರು, ಯುವಕರು ಹಾಗೂ ಹಿರಿಯರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮಕ್ಕೆ ವಿಶೇಷ ಕಳೆ ತುಂಬಿತು.
ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ನಡೆದ ಸಭೆಯಲ್ಲಿ ಮಾತನಾಡಿದ ನಿವೃತ್ತ ಶಿಕ್ಷಕರಾದ ನಿತ್ಯಾನಂದ ಬರದೂರ ಅವರು, ಅಂಬೇಡ್ಕರ್ ಅವರು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ನಡೆಸಿದ ನಿರಂತರ ಹೋರಾಟವನ್ನು ಸ್ಮರಿಸಿದರು. ಸಮಾಜದಲ್ಲಿ ಅಸಮಾನತೆ ನಿವಾರಣೆಗಾಗಿ ಅವರು ನೀಡಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಯುವ ಮುಖಂಡರಾದ ಅಣ್ಣಪ್ಪ ಪೂ. ಲಮಾಣಿ ಅವರು ಮಾತನಾಡಿ, ಅಂಬೇಡ್ಕರ್ ಅವರ ಜೀವನವು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಅನುಸರಿಸುವುದರಿಂದ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಮಾನತೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಾಜಶೇಖರ ಬಿ.ಹೆಚ್, ಶಂಕರಗೌಡ ಪಾಟೀಲ, ಮಂಜುನಾಥಗೌಡ ಲ್ಯಾವನಗೌಡ್ರು ಪಾಟೀಲ, ಬಸನಗೌಡ ಪಾಟೀಲ್, ಎಲ್ಲಪ್ಪ ಹೊಸಮನಿ, ಈರನಗೌಡ ಫ. ದೊಡ್ಡಗೌಡ್ರು, ಅನ್ವರಸಾಬ ಮುಲ್ಲಾ, ಬಾಪುನಗೌಡ ಕಿಡಕಿನಮನಿ, ಮುತ್ತುನಗೌಡ ಸಂಕನಗೌಡ್ರು, ಬಾಹುಬಲಿ ಧಾರವಾಡ, ಪಂಚಾಯತಿ ಕಾರ್ಯದರ್ಶಿಗಳಾದ ಸದಾನಂದ ಚಿಗಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಊರಿನ ಗಣ್ಯರಿಗೆ ಸನ್ಮಾನ ಮಾಡಲಾಯಿತು.
ಮಾದೇವಪ್ಪ ಕರಿಯಪ್ಪ ಮಾದರ, ರಾಮಣ್ಣ ಕರೆಪ್ಪ ಮಾದರ, ಉಳವಪ್ಪ ಕರಿಯಪ್ಪ ಮಾದರ, ನಿಂಗಪ್ಪ ಪಕೀರಪ್ಪ ಮಾದರ, ಮಲಕಪ್ಪ ನೀಲಪ್ಪ ಮಾದರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ (ಎಸ್.ಸಿ ಘಟಕ ಕಾಂಗ್ರೆಸ್ ಸಮಿತಿ) ಶೇಖಪ್ಪ ಡಿ. ಮಾದರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ವರದಿ ಬಸವರಾಜ ಎಸ್. ಎನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!