ಬೆಳಗಾವಿ:ಅಥಣಿ ಮತಕ್ಷೇತ್ರದ ಸಪ್ತಸಾಗರ ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ವಿದ್ಯಾನಗರ ಕ್ರಾಸ್ನಿಂದ ಸಪ್ತಸಾಗರ ರಸ್ತೆಯವರೆಗೆ ಸುಮಾರು 800 ಲಕ್ಷ ರೂಪಾಯಿ ವೆಚ್ಚದಲ್ಲಿ ಬಾಕ್ಸ್ ಕಲ್ವರ್ಟ್ಸ್, ತಡೆಗೋಡೆ ಹಾಗೂ ರಸ್ತೆ ಎತ್ತರಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ಇದೇ ವೇಳೆ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 90 ಲಕ್ಷ ರೂಪಾಯಿ ವೆಚ್ಚದಲ್ಲಿ ಸಪ್ತಸಾಗರ ಗ್ರಾಮದಿಂದ ಕಮತ ರಸ್ತೆಯವರೆಗೆ 1.5 ಕಿ.ಮೀ. ರಸ್ತೆ ಡಾಂಬರೀಕರಣ ಹಾಗೂ 100 ಲಕ್ಷ ರೂಪಾಯಿ ವೆಚ್ಚದಲ್ಲಿ ಸಪ್ತಸಾಗರದಿಂದ ಸಿದ್ದಾಪುರ ರಸ್ತೆಯ 2.1 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೂ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಗ್ರಾಮಸ್ಥರೊಂದಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಪ್ತಸಾಗರ ಗ್ರಾಮದ ಹಿರಿಯ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.
ವರದಿ ವಿಠ್ಠಲ ಖೋಕಾಟೆ




















