ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೌಡ ಸ್ಪೋರ್ಟ್ಸ್ ಫೆಸ್ಟ್’ನ ಮುಖ್ಯ ಅತಿಥಿಯಾಗಿ ಶಾಸಕ ಅಜ್ಜಿಕುಟ್ಟಿರ ಎಸ್.‌ ಪೊನ್ನಣ್ಣ

ಮಡಿಕೇರಿ: ಗಾಂಧಿ ಮೈದಾನದಲ್ಲಿ ಆಯೋಜನೆಗೊಂಡ ಗೌಡ ಸ್ಪೋರ್ಟ್ಸ್ ಫೆಸ್ಟ್-2026ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಮಡಿಕೇರಿಯ ಪ್ರಸಿದ್ಧ ಗಾಂಧಿ ಮೈದಾನದಲ್ಲಿ, ಮಡಿಕೇರಿ ಅರೆಭಾಷೆ ಗೌಡ ಕ್ರೀಡಾ ಅಕಾಡೆಮಿ ವತಿಯಿಂದ ಈ ಕ್ರೀಡಾಕೂಟವು ಆಯೋಜನೆಗೊಂಡಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದ ಮಾನ್ಯ ಶಾಸಕರು, ಕೊಡಗಿನ ಪ್ರಮುಖ ಸಮದಾಯಗಳಲ್ಲಿ ಒಂದಾಗಿರುವ ಅರೆ ಭಾಷೆ ಗೌಡ ಸಮುದಾಯದವರು ಕ್ರೀಡೆಯಲ್ಲಿ ಸಹ ಉತ್ತಮ ಹೆಸರನ್ನು ಗಳಿಸಿದವರಾಗಿದ್ದಾರೆ. ಸಮಾಜವನ್ನು ಒಗ್ಗೂಡಿಸುವಲ್ಲಿ ಹಾಗೂ ಸಮಾಜದ ಸ್ವಾಸ್ತ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಕ್ರೀಡಾಕೂಟಗಳು ಅತ್ಯಂತ ಸಹಕಾರಿಯಾಗಲಿದೆ. ಮಡಿಕೇರಿ ಅರೇ ಭಾಷೆ ಗೌಡ ಕ್ರೀಡಾ ಅಕಾಡೆಮಿಯ ಈ ಪ್ರಯತ್ನವು, ಕ್ರೀಡೆಗೆ ಮಾತ್ರವಲ್ಲದೆ ಸಮಾಜದ ಸಹಬಾಳ್ವೆಗೂ ಒಂದು ಉತ್ತಮ ವೇದಿಕೆಯಾಗಿ ಲಭಿಸಿದೆ. ಸಮಾಜದ ಬಾಂಧವರು ಉತ್ತಮ ರೀತಿಯಲ್ಲಿ ಆಟ ಆಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ಕ್ರೀಡೆಯಿಂದ ಕಲಿಯುವ ಉತ್ತಮ ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಏಳಿಗೆ ಸಾಧ್ಯ ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಸೂರಜ್ ಹೊಸೂರು, ಆಪ್ರು ರವೀಂದ್ರ, ಮುತ್ತು ರಾಜು, ದಂಬೆಕೊಡಿ ಕವನ ಭೀಷ್ಮ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!