ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಣ್ಣನವರ ಸಮಾನತೆ, ಕಾಯಕ ತತ್ವ ನಮಗೆಲ್ಲರಿಗೂ ಮಾದರಿ.

ಚಿಟಗುಪ್ಪಾ: ವಿಶ್ವಗುರು ಬಸವಣ್ಣನವರ ಸಮಾನತೆ, ಕಾಯಕವೇ ಕೈಲಾಸ ಮತ್ತು ಅನುಭವ ಮಂಟಪದ ತತ್ವಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಮಾದರಿಯಾಗಬೇಕು ಎಂದು ಶರಣೆ ಇಂದುಮತಿ ಗಾರಂಪಳ್ಳಿ ಹೇಳಿದರು.

ಪಟ್ಟಣ್ಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದುಮತಿ ಗಾರಂಪಳ್ಳಿ ತಾಯಿಯವರ ಮನೆಯಲ್ಲಿ 893ನೇ ಜಯಂತಿ ಆಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ತಾಯಿಯವರು ಜಾತಿ, ಮತ, ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕಂಡು, ಆಚರಣೆಯಲ್ಲಿ ತರುವುದೇ ಬಸವ ತತ್ವ ಮುಖ್ಯ ಉದ್ದೇಶ, ಮೂಢನಂಬಿಕೆಗಳನ್ನು ತೊರೆದು, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಬಸವಣ್ಣನವರ ಮತ್ತು ಶಿವಶರಣರ ವಚನಗಳನ್ನು ಪಠಿಸುವುದು, ಅವುಗಳ ಅರ್ಥೈಸಿಕೊಂಡು ಜೀವನವನ್ನು ತಾತ್ವಿಕತೆಯೊಂದಿಗೆ ಸಾಗಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶರಣ ಚಂದ್ರಶೇಖರ ತಂಗಾ ಮಾತನಾಡಿ 12ನೇ ಶತಮಾನದ ಬಸವಣ್ಣನವರ ಕಾಯಕ, ದಾಸೋಹ ಮತ್ತು ಸಮಾನತೆಯ ತತ್ವಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಆಶಯದೊಂದಿಗೆ ಬಸವ ಜಯಂತಿ ಆಚರಣೆ ಮಾಡುವುದು ಸಮಂಜಸವಾಗಿದೆ ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶರಣ ಸಂಗಮೇಶ ಎನ್ ಜವಾದಿ ರವರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಶರಣೆ ಹೇಮಾ ಬಿಡಪ್ಪ,ಶರಣೆ ಈಶ್ವರಮ್ಮಾ ಗಾರಂಪಳ್ಳಿ, ಶರಣೆ ಶರಣಮ್ಮ ಗಾರಂಪಳ್ಳಿ, ಶರಣ ಗುರುನಾಥ ಮಹಾಜನ್, ಶೌರ್ಯ ಜವಾದಿ, ಶ್ರಾವ್ಯ ಜವಾದಿ. ಸೂರ್ಯಕಾಂತ ಗುಡ್ಡಾ, ವೀರ ಮಹಾಜನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!