ವಿಜಯಪುರ/ ತಾಳಿಕೋಟೆ: ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದಿಂದ ಸಕಲ ವಾದ್ಯ ಮೇಳಗಳೊಂದಿಗೆ ಆರಂಭವಾದ ಶ್ರೀ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆಯು ಕತ್ರಿ ಬಜಾರ್, ಪಂಚ ಶಹೀದ ದರ್ಗಾ, ಭೋವಿ ಸಮಾಜದ ಪಿಲೇಕಮ್ಮ ದೇವಸ್ಥಾನ ಮಾರ್ಗವಾಗಿ ಮಾದರ ಚೆನ್ನಯ್ಯ ಬಡಾವಣೆಗೆ ತಲುಪಿ ದೇವಸ್ಥಾನಕ್ಕೆ ಪ್ರವೇಶಿಸಿತು. ನಂತರ ಸಕಲ ಭಕ್ತಾದಿಗಳಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೆರವಣಿಗೆಯಲ್ಲಿ ತಾಳಿಕೋಟೆ ಪುರಸಭೆ ಮಾಜಿ ಸದಸ್ಯರಾದ ಪ್ರಭುಗೌಡ ಮದರಕಲ್ಲ, ಜೈಸಿಂಗ್ ಮೂಲಿಮನಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬ ಕೆಂಭಾವಿ, ಸಮಾಜದ ಪ್ರಮುಖರಾದ ಬಸ್ಸು ಮಾದರ, ರಾಮಣ್ಣ ಕಟ್ಟಿಮನಿ, ಗೋಪಾಲ ಕಟ್ಟಿಮನಿ, ಬಸ್ಸಪ್ಪ ಮಾದರ ಹಾಗೂ ಶ್ರೀ ಮಾದರ ಚೆನ್ನಯ್ಯ ಸಮಾಜದ ಬಾಂಧವರು ಅಪಾರ ಸಂಖ್ಯೆಯಲ್ಲಿ ಇದ್ದರು.
ವರದಿ ನಜೀರ್ ಚೋರಗಸ್ತಿ




















