ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿನ ಸಂಪುಟ ಪುನರ್ ರಚನೆ, ಸಿಎಂ ಬದಲಾವಣೆ ಚರ್ಚೆ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದರು. ಸಹೋದರ ಡಿ.ಕೆ.ಸುರೇಶ್ ಜೊತೆ ಶುಕ್ರವಾರ ಸಂಜೆ ದೆಹಲಿಯ ರಾಜಾಜಿಮಾರ್ಗದಲ್ಲಿರುವ ಖರ್ಗೆಯವರ ನಿವಾಸಕ್ಕೆ ತೆರಳಿದ ಡಿಕೆಶಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ನಿವಾಸದಲ್ಲಿ ಕಳೆದರು. ಭೇಟಿ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು ಎನ್ನಲಾಗಿದೆ. ಆದರೆ, ಮಾತುಕತೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಿಕೆಶಿ ನಿರಾಕರಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್




















