ಬಳ್ಳಾರಿ / ಕಂಪ್ಲಿ : ಈಗಾಗಲೇ ಸುಸಜ್ಜಿತ ನ್ಯಾಯಾಲಯ ನಿರ್ಮಾಣಕ್ಕಾಗಿ 3.13 ಎಕರೆ ಜಾಗ ಮೀಸಲಿಟ್ಟಿದ್ದು, ಸರ್ಕಾರದ ಮಟ್ಟದಲ್ಲಿ ಸುಮಾರು 25 ಕೋಟಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈಗ ಆರಂಭಗೊಂಡಿರುವ ನ್ಯಾಯಾಲಯದಲ್ಲಿ ಒಂದೊಂದಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ 20ನೇ ವಾರ್ಡಿನ ಶಿಬಿರದಿನ್ನಿ (ಮಾರುತಿನಗರ)ಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಸಿವಿಎಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನಾ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂಪ್ಲಿಯಲ್ಲಿ ನ್ಯಾಯಾಲಯ ಸ್ಥಾಪಿಸುವ ಕನಸಾಗಿತ್ತು. ಆದರೆ, ಈಗ ಆ ಕನಸು ನನಸಾಗಿದೆ. ಇಲ್ಲಿನ ನ್ಯಾಯಾಲಯದಿಂದ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಕೀಲರಾದ ಪ್ರಭಾಕರ, ಹರೀಶ್, ರುದ್ರಪ್ಪ, ಶಿವಪ್ಪ, ಯಂಕಪ್ಪ, ನಟರಾಜ, ಹುಲುಗಪ್ಪ, ವೀರಣ್ಣ, ಮಾರುತಿಸಿಂಗ್, ಮೋಹನ್ ಕುಮಾರ್ ದಾನಪ್ಪ, ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ಮುಂಖಡರಾದ ಕೆ.ಎಂ.ಹೇಮಯ್ಯಸ್ವಾಮಿ, ಹೊಸಕೋಟೆ ಜಗದೀಶ, ಜಿ.ರಾಮಣ್ಣ, ಬಿ.ಸಿದ್ದಪ್ಪ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















