ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಪತ್ನಿ ನೇಣಿಗೆ ಶರಣು : ಪ್ರಕರಣ ದಾಖಲು

ಬಳ್ಳಾರಿ / ಕಂಪ್ಲಿ : ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕವಾಗಿ ಮನನೊಂದು ಪತ್ನಿ ನೇಣಿಗೆ ಶರಣಾದ ಧಾರುಣ ಘಟನೆ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ನಡುವಲ ಮಸೀದಿ ಬಳಿಯಲ್ಲಿರುವ ತವರು ಮನೆಯಲ್ಲಿ ಐಶ್ವರ್ಯ (24) ಮೃತಪಟ್ಟ ದುರ್ಧೈವಿ.
ಈ ಹಿಂದೆ ಸಿರಿಗೇರಿಯ ಪ್ರದೀಪ್ ಕುಮಾರ ಎಂಬ ನಿವಾಸಿಯನ್ನು ಕಂಪ್ಲಿಯ ಐಶ್ವರ್ಯ ರಿಜಿಸ್ಟರ್ ಮದುವೆಯಾಗಿದ್ದಳು. ನಂತರ ಕುರುಗೋಡು ಪಟ್ಟಣದಲ್ಲಿ ದಾಂಪತ್ಯ ಜೀವನ ನಡೆಸುತ್ತಾ ಬಂದಿದ್ದಾರೆ. ಇದೇ ಮೇ.14ರಂದು ಐಶ್ವರ್ಯಳನ್ನು ಪತಿರಾಯ ಮನೆ ಹೊರಗಡೆಯಲ್ಲಿ ಬಿಟ್ಟು ಕುರುಗೋಡಿಗೆ ಮರಳಿದ್ದಾನೆ. ಮೇ.17ರಂದು ಮಧ್ಯಾಹ್ನ 13:30ರಿಂದ 3ಗಂಟೆ ಒಳಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾಳೆ. ಮೃತ ಐಶ್ವರ್ಯ ತಂದೆ ಚಂದ್ರಮೌಳಿ ಇವರು ವರದಕ್ಷಿಣೆ ಕಿರುಕುಳದಡಿಯಲ್ಲಿ ದೂರು ನೀಡಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೋರಣಗಲ್ಲು ಉಪ ವಿಭಾಗದ ಡಿವೈಎಸ್ಪಿ ಪ್ರಸಾದ್ ಗೋಖುಲೆ ಇವರು ತನಿಖೆ ಕೈಗೊಂಡಿದ್ದಾರೆ. ಸಂಜೆ ಶವ ಸಂಸ್ಕಾರ ನಡೆದಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!