ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ಮುತ್ತು ವಡ್ಡರ ಆಯ್ಕೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ ಹಾಗೂ ಕರುನಾಡು ಕಲ್ಪವೃಕ್ಷ ಫೌಂಡೇಶನ್ ರವರ ದ್ವಿತೀಯ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕಲ್ಪವೃಕ್ಷೋತ್ಸವ ದ್ವಿತೀಯ ಸಮ್ಮೇಳನ: 2026-27ರ ಸಮ್ಮೇಳನದಲ್ಲಿ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ಗಣಿತ ಶಿಕ್ಷಕರಾಗಿರುವ ಶ್ರೀ ಮುತ್ತು ವಡ್ಡರ ಇವರ ಶೈಕ್ಷಣಿಕ ಹಾಗೂ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಶ್ರೀ ಕನಕ ಪ್ರೀತೀಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ ಹೆಚ್ ಎಸ್ ಗೌಡರ್ ಅವರು ತಿಳಿಸಿದ್ದಾರೆ.
ವೃತ್ತಿಯಲ್ಲಿ ಶಿಕ್ಷಕರಾಗಿರುವ ಶ್ರೀ ಮುತ್ತು ವಡ್ಡರ ಅವರು ಪ್ರವೃತ್ತಿಯಲ್ಲಿ ಸಾಹಿತ್ಯ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅತಿ ಸರಳ ಗಣಿತ, ಎಲೆಮರೆ ಕಾಯಿಗಳು, ಸನ್ಮಾರ್ಗದ ದುಂಬಿ ಮತ್ತು ಬದಲಾಗು ನೀ ಬೆಳಕಾಗು ನೀ ಎಂಬ ಸ್ಫೂರ್ತಿದಾಯಕ ಕೃತಿಗಳನ್ನು ರಚಿಸಿದ್ದಾರೆ.
ಜೊತೆ ಜೊತೆಗೆ ನಾಡಿನ ಹಲವಾರು ಪತ್ರಿಕೆಗಳಿಗೆ ಕಥೆ, ನ್ಯಾನೋ ಕಥೆಗಳು, ಲೇಖನ ಹಾಗೂ ಕವನಗಳನ್ನು ಬರೆದು ಪ್ರಕಟಿಸಿದ್ದಾರೆ, ಇವರು ಪ್ರತಿನಿತ್ಯ ವ್ಯಾಟ್ಸಪ್ ಬಳಗದಲ್ಲಿ ಸುಮಾರು 6,000 ಜನರಿರುವ ಜ್ಞಾನಜ್ಯೋತಿ ದಿನಂಪ್ರತಿ ಎಂಬ ಬಳಗದಲ್ಲಿ ನಿತ್ಯ ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಇವರ ಶೈಕ್ಷಣಿಕ ಹಾಗೂ ಸಾಹಿತ್ಯ ಸೇವೆಯನ್ನು ಪರಿಗಣಿಸಿ 2026-27 ನೇ ಸಾಲಿನ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಇದೇ ತಿಂಗಳು ದಿನಾಂಕ 28 ರಂದು ಬಾಗಲಕೋಟೆ ಜಿಲ್ಲೆಯ ಚಿಕ್ಕಮ್ಯಾಗೇರಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ನಡೆಯುವ ಕಲ್ಪವೃಕ್ಷೋತ್ಸವ ದ್ವಿತೀಯ ಸಮ್ಮೇಳನದಲ್ಲಿ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕ ಶ್ರೀ ಮುತ್ತು ವಡ್ಡರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!