ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ನಿವಾಸಿ, ಗ್ರಾಮ ಆಡಳಿತ ಅಧಿಕಾರಿ ಮಹಾದೇವ ವಯಸ್ಸು 27 ಇವರು ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 4 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ. ಬಾಗಿಲಿಗೆ ಬೀಗ ಹಾಕಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮನನೊಂದ ದುಃಖತಪ್ತ ವೃದ್ಧ ತಾಯಿ ಹಾಗೂ ಕುಟುಂಬಸ್ಥರು ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ಆರೋಪಿಸಿದರು.
ನಿನ್ನೆ ಸಾಯಂಕಾಲ ಈ ಘಟನೆ ನಡೆದರೂ ಸಹ ತಾಲ್ಲೂಕಿನ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ… ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು..
ಇದನ್ನು ಅರಿತ ತಾಲೂಕ ದಂಡಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಸ್ಥಳಕ್ಕೆ ಪೊಲೀಸರೊಂದಿಗೆ ದೌಡಾಯಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು..
ಆದರೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ನ್ಯಾಯ ಒದಗಿಸುವವರೆಗೆ ಅಂತಿಮ ಸಂಸ್ಕಾರ ಮಾಡುವುದಿಲ್ಲವೆಂದು ಪಟ್ಟು ಹಿಡಿದರು. ತದ ನಂತರ ಜಿಲ್ಲಾಧಿಕಾರಿಗಳು ಕರೆ ಮಾಡಿ ಮಾತಾಡಿ ತನಿಖೆ ಮುಂದುವರೆಸುವುದಾಗಿ ಭರವಸೆ ನೀಡಿದರು.
ಸ್ಥಳಕ್ಕೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಬಂದು ಪರಿಸ್ಥಿತಿ ತಿಳಿಗೊಳಿಸಿದರು.
ವರದಿ :ಶ್ರೀನಿವಾಸ ಬಿರಾದಾರ




















