ಕೊಡಗು : ಶಾಸಕ ಡಾ. ಮಂತರ್ ಗೌಡರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರು ಹಾಗೂ ಹಿರಿಯ ಮಾರ್ಗದರ್ಶಕರಾದ ಶ್ರೀ ಡಾ.ಜಿ .ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನೂತನ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಯತೀಂದ್ರ ಸಿದ್ಧರಾಮಯ್ಯ , ಡಾ.ಶರಣ್ ಪ್ರಕಾಶ್ ಪಾಟೀಲ್ ಹಾಗೂ ಎಂ.ಬಿ. ಪಾಟೀಲ್’ರವರನ್ನು ಭೇಟಿ ಮಾಡಿ ಶುಭ ಹಾರೈಸಲಾಯಿತು.
ಜನಸೇವೆಯ ಈ ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲೆಂದು ಹಾರೈಸಿದರು.
ನಂಜನಗೂಡು ಶಾಸಕರಾದ ದರ್ಶನ್ ಧ್ರುವ ನಾರಾಯಣ್ , ರವಿ ಶಂಕರ್ ರವರು, ಕಾಡ ಅದ್ಯಕ್ಷರಾದ ಮರಿಸ್ವಾಮಿಯವರು , ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪನವರು , ಧೀರೆನ್ ರವರು , ಮಹಾನಿಧಿಯವರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ಪ್ರಿತುನ್ ಪೂವಣ್ಣ ಅಯ್ಯನೆರವಂಡ




















