ಬಳ್ಳಾರಿ / ಕಂಪ್ಲಿ: ಮುಂದಿನ ಪೀಳಿಗೆಯ ನೆಮ್ಮದಿ, ಭವಿಷ್ಯಕ್ಕಾಗಿ ಪರಿಸರ ಉಳಿಸುವ ಅಗತ್ಯವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ತಿಳಿಸಿದರು. ತಾಲ್ಲೂಕಿನ ಚಿಕ್ಕಜಾಯಿಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ನಡೆದ ವಿಶ್ವ ಪರಿಸರ ದಿನಾಚರಣೆ ಜಾಗೃತಿ ಮತ್ತು ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರಕೃತಿ ಸಮತೋಲನ ನಮ್ಮೆಲ್ಲರ ಹೊಣೆ ನಾವೆಲ್ಲರೂ ಪರಿಸರನ್ನ ಉಳಿಸಿ ಬೆಳೆಸಬೇಕು ಮುಂದಿನ ಜನಾಂಗಕ್ಕೆ ಪರಿಸರದಿಂದ ಉಜ್ವಲ ಭವಿಷ್ಯ ಸಿಗಬೇಕೆಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ವಿವಿಧ ತಳಿಯ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿಪರ ರೈತ ಅಮರೇಗೌಡ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಕಲ್ಲೂರ್, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರೇಶ್ಗೌಡ, ಟ್ರಸ್ಟ್ ಯೋಜನಾಧಿಕಾರಿ ರಾಘವೇಂದ್ರ, ಕೃಷಿ ಅಧಿಕಾರಿ ಎಸ್.ಬಿ.ಸಂಜುಕುಮಾರ್, ಪ್ರಮುಖರಾದ ಪಾಂಡುರಂಗ, ಸುರೇಶ್, ಗಂಗಮ್ಮ, ಸಂಗೀತಾ, ಸಿರಿಷಾ ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















