ಕೊಪ್ಪಳ/ ಕಾರಟಗಿ: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿ ಸಮುದಾಯ ಭವನವನ್ನು ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಅನುಷ್ಠಾನದ ಅಡಿಯಲ್ಲಿ, 25 ಲಕ್ಷದ ಮೊತ್ತದ ಕಾಮಗಾರಿಗೆ ಕನಕಗಿರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವರಾಜ್ ಎಸ್ ತಂಗಡಿಗಿಯವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕನಕಗಿರಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು, ವಿವಿಧ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಗ್ರಾಮದ ಗುರು ಹಿರಿಯರು, ಬೀರಲಿಂಗೇಶ್ವರ ಯುವಕ ಮಂಡಳಿಯವರು, ಗ್ರಾಮದ ವಿವಿಧ ಸಮಾಜದ ಮುಖಂಡರು, ಯುವಕರು ಭಾಗಿಯಾಗಿದ್ದರು.
- ಕರುನಾಡ ಕಂದ ಸುದ್ದಿ




















