ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂವಿಧಾನದ ಮೂಲಕ ಸಮಾನತೆ ಮತ್ತು ಸ್ವಾತಂತ್ರ‍್ಯ ಪಡೆದುಕೊಳ್ಳಲು ಅವಕಾಶವಿದೆ : ಪ್ರಭಾರಿ ನ್ಯಾಯಾಧೀಶ ಸಿದ್ಧಲಿಂಗಯ್ಯ ಬಿ.ಗಂಗಾಧರ್ ಮಠ

ಕಂಪ್ಲಿ ನೂತನ ನ್ಯಾಯಲಯಕ್ಕೆ ವಿದ್ಯುಕ್ತ ಚಾಲನೆ

ಬಳ್ಳಾರಿ / ಕಂಪ್ಲಿ : ನ್ಯಾಯಾಂಗ ವ್ಯವಸ್ಥೆಯು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಮೂಲಕ ಸಮಾನತೆ ಮತ್ತು ಸ್ವಾತಂತ್ರ‍್ಯ ಪಡೆದುಕೊಳ್ಳಲು ಅವಕಾಶವಿದೆ ಎಂದು ಬಳ್ಳಾರಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಮತ್ತು ಕಂಪ್ಲಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಸಿದ್ಧಲಿಂಗಯ್ಯ ಬಿ.ಗಂಗಾಧರ್ ಮಠ ಹೇಳಿದರು.
ಅವರು ಶುಭ ಶುಕ್ರವಾರದಂದು ಮೊದಲ ಬಾರಿಗೆ ಆರಂಭಗೊಂಡ ಪಟ್ಟಣದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಕಾರ್ಯಕಲಾಪಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ, ಕಕ್ಷಿದಾರರಿಗೆ ತುರ್ತಾಗಿ ನ್ಯಾಯ ಒದಗಿಸುವುದು ನ್ಯಾಯಾಲಯಗಳ ಕರ್ತವ್ಯವಾಗಿದೆ. ಕಾರ್ಯ ಕಲಾಪಗಳು ಆರಂಭಗೊಂಡಿದ್ದು, ವಾರದಲ್ಲಿ ಎರಡು ದಿನ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ ಎಂದರು. ನಂತರ ನ್ಯಾಯಾಧೀಶರಿಗೆ ಸನ್ಮಾನಿಸುವ ಮೂಲಕ ಸ್ವಾಗತ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ವಕೀಲರ ಬಳಗದವರು ಸೇರಿದಂತೆ ವಿವಿಧ ಇಲಾಖೆಯವರು ಉಪಸ್ಥಿತರಿದ್ದರು.

ಕಳೆದ ಏ.26ರಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!