ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ವಿನಾಶ ಮಾಡಿದರೆ ಭವಿಷ್ಯದ ದಿನಗಳು ಮಾನವ ಜನಾಂಗಕ್ಕೆ ಅಪಾಯಕಾರಿ ಆಗಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಭೇರ್ಯ ರಾಮಕುಮಾರ್ ನುಡಿದರು.
ಅವರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರುಳಯ್ಯನ ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರದಿಂದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬರೂ ತಮ್ಮ ಜನ್ಮ ದಿನದಂದು, ತಮ್ಮ ತಂದೆ ತಾಯಿಯ ಜನ್ಮ ದಿನದಂದು, ವಿವಾಹ ವಾರ್ಷಿಕೋತ್ಸವ ದಿನದಂದು, ತಮ್ಮ ಹಿರಿಯರ ನೆನಪಿನಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿ ನೆಡ ಬೇಕು. ಆ ಮೂಲಕ ಭವಿಷ್ಯದ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ
ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಸಮಾಜಸೇವಕರಾದ ಡಾ.ಚಕ್ರಪಾಣಿ, ಡಾ. ಗುರುಪ್ರಸಾದ್, ಮುಖ್ಯ ಶಿಕ್ಷಕರಾದ ಬಸವರಾಜು ಪರಿಸರ ಸಂರಕ್ಷಣೆ ಕುರಿತು ಮಾತನಾಡಿದರು. ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















