ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಿಕಾ ಸಾಮಗ್ರಿ ವಿತರಣೆ

ಹುನಗುಂದ: ತಾಲೂಕಿನ ಚಿಕ್ಕಯರನಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು. ಮುಖ್ಯಗುರು ಕಿರಣ ವಜ್ರಮಟ್ಟಿ ಪ್ರತಿ ವರ್ಷದಂತೆ ಈ ವರ್ಷವೂ ತಮ್ಮ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ಮೂರು ಕಿಂಗ್ ಸೈಜ್ ನೋಟ್ ಪುಸ್ತಕ, ಪೆನ್ನು, ಸೀಸ, ರಬ್ಬರ್, ಮೆಂಡರ್ ಮತ್ತು ಒಂದು ಸ್ಕೇಲನ್ನು ತಮ್ಮ ಸ್ವಂತ ಖರ್ಚಿನಲ್ಲಿ ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಯಲಗುರದಪ್ಪ ಗರೇಬಾಳ ಮಾತನಾಡಿ, ಶಿಕ್ಷಕರು ತಮ್ಮ ಸ್ವಂತ ಖರ್ಚಿನಿಂದ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯ. ಇಂತಹ ಶಿಕ್ಷಕರ ಸಂಖ್ಯೆ ಹೆಚ್ಚಾಗಲಿ. ಸರಕಾರಿ ಶಾಲೆಗಳಲ್ಲಿ ಓದುವ ಬಡವರ ಮಕ್ಕಳಿಗೆ ನೆರವಾಗಲಿ ಎಂದರು.

ಸಮಾಜಸೇವಕ ಸೋಮಶೇಖರ ಬಲಕುಂದಿ ಮಾತನಾಡುತ್ತ, ಸರಕಾರಿ ಶಾಲೆಗಳಲ್ಲಿ ಈ ವರ್ಷದಿಂದ ದ್ವಿಭಾಷಾ ಮಾಧ್ಯಮದಲ್ಲಿ ಬೋಧನೆ, ಮೊಬೈಲ್ ಮೂಲಕ ಮಕ್ಕಳ ಹಾಜರಾತಿಯಂತಹ ಪ್ರಮುಖ ಬದಲಾವಣೆಯೊಂದಿಗೆ ಶಿಕ್ಷಣ ಸಾಗುತ್ತಿದ್ದು, ನಮ್ಮ ಶಾಲೆಗಳು ಸಹ ಯಾವುದೇ ಖಾಸಗೀ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಪಥದತ್ತ ನಡೆದಿವೆ. ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಅವು ಮುಚ್ಚಿಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಮುಖ್ಯ ಗುರು ಕಿರಣ ವಜ್ರಮಟ್ಟಿ ಮಾತನಾಡಿ, ಭವಿಷ್ಯದಲ್ಲಿ ನಮ್ಮ ಮಕ್ಕಳು ನಮಗೆ ಅನ್ನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ; ಆದರೆ ನಮಗೆ ನಿತ್ಯ ಅನ್ನ ನೀಡುವ ಈ ಮಕ್ಕಳಿಗಾಗಿ ತುಸು ಹಣ ಖರ್ಚು ಮಾಡುವುದರಲ್ಲಿ ದೊಡ್ಡಸ್ತಿಕೆಯೇನೂ ಇಲ್ಲ. ಇದು ನಮ್ಮ ಆತ್ಮ ತೃಪ್ತಿಯ ಕಾರ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಇಲಾಖೆಯಿಂದ ಪೂರೈಸಲ್ಪಟ್ಟ ಎರಡು ಜೊತೆ ಉಚಿತ ಸಮವಸ್ತ್ರಗಳನ್ನು ಹೊನ್ನರಹಳ್ಳಿ ಶಾಲೆಯ ಮುಖ್ಯಗುರು ಪ್ರಭು ಮಾಲಗಿತ್ತಿ ಮಕ್ಕಳಿಗೆ ವಿತರಣೆ ಮಾಡಿದರು. ಶಿಕ್ಷಕಿ ಸಾವಿತ್ರಿ ಮಾಶ್ಯಾಳ, ಸಿದ್ದು ಶೀಲವಂತರ, ಅಶೋಕ ಬಳ್ಳಾ ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!