ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮೀಣ ಪ್ರದೇಶದಲ್ಲಿ ಸಡಗರದ ಯೋಗ ದಿನಾಚರಣೆ: ನರೇಗಾ ಕಾರ್ಮಿಕರಿಂದ ಯೋಗಾಭ್ಯಾಸ

ಹರಪನಹಳ್ಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ದುಡಿಯುವ ಗ್ರಾಮೀಣ ಪ್ರದೇಶದ ಜನರಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಉದ್ದೇಶದಿಂದ, ಇಂದು ಮತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಎನ್ ಶಿರನಹಳ್ಳಿ ಗ್ರಾಮದಲ್ಲಿ ನರೇಗಾ ಕೆಲಸದ ಸ್ಥಳದಲ್ಲಿ ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
ದೈನಂದಿನ ಕೆಲಸ ಆರಂಭಿಸುವ ಮುನ್ನ, ಕೂಲಿ ಕಾರ್ಮಿಕರು ಸಾಮೂಹಿಕವಾಗಿ ಯೋಗಾಸನ ಮತ್ತು ಪ್ರಾಣಾಯಾಮ, ಕಪಾಲಭಾತಿ, ಅನುಲೋಮ-ವಿಲೋಮ ಮಾಡಿದರು. ಸ್ಥಳೀಯ ಯೋಗ ತರಬೇತುದಾರ ಹಾಗೂ ಮೆಟ್ ದಕ್ಷಿಣಮೂರ್ತಿ ಕಿತ್ತೂರು ಕಾರ್ಮಿಕರಿಗೆ ಸರಳವಾದ ಯೋಗಭ್ಯಾಸಗಳನ್ನು ಮಾಡಿಸಿ, ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.

ಆರೋಗ್ಯಕ್ಕೆ ಆದ್ಯತೆ: ನಿರಂತರ ದೈಹಿಕ ದುಡಿಮೆಯಲ್ಲಿ ತೊಡಗುವ ಕಾರ್ಮಿಕರು, ಯೋಗ ಮಾಡುವುದರಿಂದ ಬೆನ್ನುನೋವು, ಕೀಲುನೋವು ಸೇರಿದಂತೆ ದೈಹಿಕ ಒತ್ತಡದಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ತಿಳಿಸಿದರು.
ಜನರ ಭಾಗಿತ್ವ: ಈ ವಿಶೇಷ ಕಾರ್ಯಕ್ರಮದಲ್ಲಿ ನರೇಗಾ ಮೇಲ್ವಿಚಾರಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಮಿಕರ ಜೊತೆ ಯೋಗಾಸನದಲ್ಲಿ ಪಾಲ್ಗೊಂಡರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!