ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಅವರು ರಾಜ್ಯಮಟ್ಟದ ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಎಸ್. ರಾಮಪ್ಪ ಪತ್ರಿಕಾ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಶೀರ್ಷಿಕೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರು ಪ್ರತಿಭಾ ಪರಿಷತ್ (ರಿ.) ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಅನುಶ್ರೀ ತಂಡದ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಭಾ ಪರಿಷತ್ತಿನ ಅಧ್ಯಕ್ಷರಾದ ಪಿ. ಮಹೇಶ್ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.
ರಾಜ್ಯಮಟ್ಟದ ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ ಸಮಿತಿ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಂಡು ಯಶಸ್ವಿಗೊಳಿಸಲು ಶ್ರಮಿಸುತ್ತೇನೆ ಹಾಗೂ ನನ್ನನ್ನು ಆಯ್ಕೆ ಮಾಡಲು ಸಹಕರಿಸಿದ ಪರಿಷತ್ತಿನ ಅಧ್ಯಕ್ಷರಾದ ಪಿ. ಮಹೇಶ, ಸಮಿತಿಯ ಮಾರ್ಗದರ್ಶಕರಾದ ಸದಾಶಿವ, ಮುಖ್ಯಸ್ಥರಾದ ಆಶಾ ಕಿರಣ್ ಎನ್, ತಂಡದ ನಾಯಕ ಜಿಎಂ ಪ್ರದೀಪ್ ಕುಮಾರ್ ಅವರಿಗೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.
ವರದಿ : ಜಿಲಾನಸಾಬ್ ಬಡಿಗೇರ್




















