ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಡಿದು ಹಾಕಿದ ಆಲದ ಮರ ನಟ್ಟು ಪರಿಸರ ಪ್ರೇಮ ಮೂಡಿಸಿದ ಕೀರ್ತಿ ವನಸಿರಿ ತಂಡಕ್ಕೆ ಸಲ್ಲುತ್ತದೆ:ಟೆಕ್ನೊ ಸ್ಕೂಲ್ ವಿದ್ಯಾರ್ಥಿ

ಸಿಂಧನೂರಿನ ಸತ್ಯ ಗಾರ್ಡನ್ ನಲ್ಲಿ ನೋಬಲ್ ಟೆಕ್ನೊ ಸ್ಕೂಲ್ ನ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ನೋಬೆಲ್ ಚಿಣ್ಣರ ಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೋರ್ವ ರಾಜ್ಯದಲ್ಲೇ ಹೆಸರುವಾಸಿಯಾದ ಸಿಂಧನೂರಿನಲ್ಲಿ ಮರುಜೀವ ಪಡೆದ ಅಮರ ಶ್ರೀ ಆಲದ ಮರದ ಬಗ್ಗೆ ಮಾಹಿತಿ ನೀಡಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಸಿಂಧನೂರಿನ ಸತ್ಯಗಾರ್ಡನ್ ನಲ್ಲಿ ಶನಿವಾರ ನಡೆದ ನೋಬಲ್ ಟೆಕ್ನೊ ಸ್ಕೂಲ್ ನ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ನೋಬೆಲ್ ಚಿಣ್ಣರ ಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೋರ್ವ ಮಾತನಾಡಿ ಸಿಂಧನೂರಿನ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರು ರೈತನೊಬ್ಬ ಕಿತ್ತು ಹಾಕಿದ 30ವರ್ಷದ ಆಲದ ಮರಕ್ಕೆ ಮರುಜೀವ ನೀಡಿದ್ದಾರೆ. ಏಳುರಾಗಿ ಕ್ಯಾಂಪ್ ನಿಂದ ಜೇಸಿಬಿ ಮೂಲಕ ನಮ್ಮ ಸಿಂಧನೂರಿನ PWDಕ್ಯಾಂಪಿನ ನೀರಾವರಿ ಇಲಾಖೆಯ ಆವರಣದಲ್ಲಿ ಗಿಡವನ್ನು ನೆಟ್ಟು ಪರಿಸರ ಪ್ರೇಮವನ್ನು ಇಡೀ ಜಗತ್ತಿನಲ್ಲಿ ಸಾರಿದ್ದಾರೆ.ಇಂತಹ ಒಂದು ವನಸಿರಿ ತಂಡ ನಮ್ಮ ಸಿಂಧನೂರಿನಲ್ಲಿ ಇರುವುದು ನಮ್ಮ ಹೆಮ್ಮೆಯ ವಿಷಯ.ರಾಜ್ಯಾದ್ಯಂತ ಹಸರುಕರಣ ಮಾಡಲು ಇಂತಹ ತಂಡಗಳಿಗೆ ನಾವುಗಳೆಲ್ಲರೂ ಸಹಕಾರ,ಪ್ರೋತ್ಸಾಹ ನೀಡುವ ಮೂಲಕ ಉತ್ತೇಜಿಸಬೇಕು ಎಂದು ವಿದ್ಯಾರ್ಥಿ ಮಾತನಾಡಿದನು.

ಈ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ಬಗ್ಗೆ ಮಾಹಿತಿ ಮತ್ತು ವಿಶೇಷವಾಗಿ ಅಮರ ಶ್ರೀ ಆಲದ ಮರದ ಬಗ್ಗೆ, ಪರಿಸರ ಜಾಗೃತಿ ಮೂಡಿಸಿದ ವಿದ್ಯಾರ್ಥಿಗೆ ಮತ್ತು ಕಾರ್ಯಕ್ರಮವನ್ನು ಆಯೋಜಿಸಿದ ನೋಬಲ್ ಟೆಕ್ನೊ ಸ್ಕೂಲ್ ಆಡಳಿತ ಮಂಡಳಿಗೆ ವನಸಿರಿ ಫೌಂಡೇಶನ್ ವತಿಯಿಂದ ಧನ್ಯವಾದಗಳು ಎಂದು ವನಸಿರಿ ಫೌಂಡೇಶನ್ ಅದ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ನೋಬೆಲ್ ಟೆಕ್ನೊ ಸ್ಕೂಲ್ ಆಡಳಿತ ಮಂಡಳಿಯ ಸದಸ್ಯರು,ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ