ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ : ಗ್ರಾಮಗಳ ನಿವಾಸಿಗಳಿಂದ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ.

ತುಮಕೂರು ಜಿಲ್ಲೆಯ
ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕುರಿಹಳ್ಳಿ ಹಾಗೂ ಬೋರಪ್ಪನಹಟ್ಟಿ ಗ್ರಾಮಗಳ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಘಟನೆ ನಡೆದಿದೆ.
ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 65 ಮನೆ ಸೈಟ್‌ಗಳ ಹಂಚಿಕೆಗೆ ಅವಕಾಶವಿದ್ದು, 90ಕ್ಕೂ ಹೆಚ್ಚು ಅರ್ಜಿಗಳು ಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ.

ಈ ನಡುವೆ ಈಗಾಗಲೇ ಮನೆ ಸೈಟ್ ಹೊಂದಿರುವ ಕೆಲವರಿಗೂ ಮತ್ತೊಮ್ಮೆ ಸೈಟ್ ಮಂಜೂರು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರದ ತುಮಕೂರು ಜಿಲ್ಲೆಯ ಎಲ್ಲಾಪುರ ನಿವಾಸಿಗಳಿಗೂ ಸೈಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಕುರಿಹಳ್ಳಿ ಮತ್ತು ಬೋರಪ್ಪನಹಟ್ಟಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಬ್-ಇನ್ಸ್ಪೆಕ್ಟರ್ ತೀರ್ಥೇಶ್ ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಗ್ರಾಮಸ್ಥರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನಿಲ್ ಸ್ಪಷ್ಟನೆ ನೀಡಿ, “ಸೈಟ್ ಹಂಚಿಕೆ ಕುರಿತು ಉಂಟಾಗಿರುವ ಗೊಂದಲವನ್ನು ಈಗಾಗಲೇ ಸರಿಪಡಿಸಿದ್ದೇವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೇ ಅರ್ಹ ಫಲಾನುಭವಿ ಸೈಟ್‌ನಿಂದ ವಂಚಿತರಾಗುವುದಿಲ್ಲ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಸೈಟ್ ಇಲ್ಲದವರಿಗೆ ಹಂತ ಹಂತವಾಗಿ ಸೈಟ್ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 20 ಎಕರೆಗೂ ಅಧಿಕ ಜಾಗವನ್ನು ಗುರುತಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ” ಎಂದು ತಿಳಿಸಿದರು.

ವರದಿ. ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!