ಮೈಸೂರು/ ನಂಜನಗೂಡು: ಮಾಜಿ ಸಂಸದ ದಿವಂಗತ ಧ್ರುವನಾರಾಯಣ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಭೆಯನ್ನು ಜನಪ್ರಿಯ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಅವರ ಸುಪುತ್ರರಾದ ಜನಪ್ರಿಯ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಮಾತನಾಡಿ ನಮ್ಮ ತಂದೆಯವರು ಎರಡು ಬಾರಿ ಸಂಸದರಾಗಿ ಮತ್ತು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರಗಳಿಗೆ ಅಪಾರ ಜನಸೇವೆ ಸಮಾಜ ಸೇವೆಯನ್ನು ಸಲ್ಲಿಸಿದ್ದಾರೆ. ಆದ್ದರಿಂದ ಅವರ ಹುಟ್ಟು ಹಬ್ಬದ ಸಲುವಾಗಿ ಈ ಸಭೆಯನ್ನು ಕೈಗೊಳ್ಳಲಾಗಿದ್ದು ಎಲ್ಲರೂ ಕೂಡ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿ ಎಂದರು. ಹುಟ್ಟುಹಬ್ಬವನ್ನು ಹೆಚ್ಚು ವಿಜೃಂಭಣೆಯಿಂದ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ಆಚರಿಸಬೇಕಾಗಿ ವಿನಂತಿಸಿಕೊಂಡರು.
ಈ ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ , ನಗರಸಭೆ ಆಯುಕ್ತರಾದ ಬಸವರಾಜು, ಬ್ಲಾಕ್ ಅಧ್ಯಕ್ಷರುಗಳಾದ ಕುರಹಟ್ಟಿ ಮಹೇಶ್, ಶಂಕರ್, ಮಾರುತಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ, ಮಂಜುನಾಥ್ ಅಬ್ದುಲ್ ಖಾದರ್ ಮುಂತಾದ ಗಣ್ಯರು
ಹಾಜರಿದ್ದರು.
- ಕರುನಾಡ ಕಂದ ಸುದ್ದಿ




















