ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಧುನಿಕ ಯುಗದಲ್ಲಿ ಆರೋಗ್ಯ ಅತಿ ಮುಖ್ಯ : ಡಾ.ರವೀಂದ್ರ ಕನಿಕೇರಿ

ಬಳ್ಳಾರಿ / ಕಂಪ್ಲಿ : ಇಂದಿನ ಆಧುನಿಕ ಯುಗದಲ್ಲಿ ಅಪೌಷ್ಠಿಕ ಆಹಾರದಿಂದಾಗಿ ಪ್ರತಿಯೊಬ್ಬರ ದೇಹದಲ್ಲಿ ರೋಗಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಜನರು ಹೆಚ್ಚಿನ ಮಟ್ಟದಲ್ಲಿ ಪೌಷ್ಠಿಕ ಆಹಾರ ಸೇವನೆಯ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚಿನ ಜಾಗೃತಿವಹಿಸಬೇಕು ಎಂದು ವೈದ್ಯಾಧಿಕಾರಿ ಡಾ.ರವೀಂದ್ರ ಕನಿಕೇರಿ ಹೇಳಿದರು.
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜೀವನದಲ್ಲಿ ಆರೋಗ್ಯ ಅತಿಮುಖ್ಯವಾಗಿದೆ. ಮನುಷ್ಯ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕಾಗಿದೆ. ಇತ್ತೀಚಿನ ದಿನಮಾನದಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲಾ ಜೀವನವೂ ಕೂಡ ದ್ವಿಗುಣವಾಗುತ್ತದೆ. ಆದರೆ, ಮನುಷ್ಯ ಆರೋಗ್ಯವಂತರಿದ್ದಾಗ ಮಾತ್ರ ಜೀವನ ಸುಂದರವಾಗಿರಲು ಸಾಧ್ಯ ಎಂದರು.
ನಂತರ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಜನರಿಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವೈದ್ಯರಾದ ಡಾ.ವೀರೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!