ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಬಿ-ಜಿ ರಾಮ್‌ಜಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ

ಬಳ್ಳಾರಿ / ಕಂಪ್ಲಿ : ವಿಬಿ-ಜಿ ರಾಮ್‌ಜಿ ಯೋಜನೆಯು ಗ್ರಾಮೀಣ ಜನತೆಗೆ ಅನುಕೂಲವಾಗಿದ್ದು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಾ. ಪಂ. ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹೇಳಿದರು.
ದೇವಲಾಪುರ ಗ್ರಾ. ಪಂ. ಆವರಣದಲ್ಲಿ ವಿಬಿ-ಜಿ ರಾಮ್‌ಜಿ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 125ಕೂಲಿದಿನಗಳು ದೊರಕಲಿದ್ದು, ಲಿಂಗ ತಾರತಮ್ಯವಿಲ್ಲದೆ 382ರೂ. ದಿನಗೂಲಿ ನೀಡಲಾಗುವುದು. ಗ್ರಾಮೀಣ ಜನತೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ದೊರಕಿಸಿ ಕೊಡಲಾಗುವುದು.

ಜಲ ಸಂಬಂಧಿತ 107ಕಾಮಗಾರಿ, ಗ್ರಾಮೀಣ ಮೂಲ ಸೌಕರ್ಯಗಳ 90ಕಾಮಗಾರಿ, ಜೀವನೋಪಾಯಕ್ಕೆ ಸಂಬಂಧಿಸಿದ 86 ಕಾಮಗಾರಿ, ತೀವ್ರ ಹವಾಮಾನ ಘಟನೆಗಳ ಶಮನದ 35ಕಾಮಗಾರಿ ಸೇರಿ ಒಟ್ಟಾರೆ 318ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣರು ಆರ್ಥಿಕ ಸ್ವಾವಲಂಬನೆಗೆ ವಿಬಿ-ಜಿ ರಾಮ್‌ಜಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.

ಪಿಡಿಒ ಮಲ್ಲಿಕಾರ್ಜುನ, ತಾಲೂಕು ಐಇಸಿ ಸಂಯೋಜಕ ಎಚ್.ಹನುಮೇಶ, ತಾಂತ್ರಿಕ ಸಂಯೋಜಕ ಸಂಗಮೇಶ, ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕ ಗೌರಿದೇವಿ, ಆಂಜನೇಯ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!