ಬಳ್ಳಾರಿ / ಕಂಪ್ಲಿ : ಪಟ್ಟಣದ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದಿಂದ ಜು.24ರಂದು ಬೆಳಿಗ್ಗೆ 11ಗಂಟೆಗೆ ‘ಪತ್ರಿಕಾ ದಿನಾಚರಣೆ’ ಸಮಾರಂಭ ಹಮ್ಮಿಕೊಂಡಿದೆ.
ಶಾಸಕ ಜೆ.ಎನ್.ಗಣೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಂಘದ ಅಧ್ಯಕ್ಷ ಬಂಗಿ ದೊಡ್ಡ ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ, ರಾಜ್ಯ ಸಮಿತಿ ಸದಸ್ಯ ಬಸವರಾಜ ಹರನಹಳ್ಳಿ, ತಹಸೀಲ್ದಾರ್ ಜೂಗಲ ಮಂಜು ನಾಯಕ, ಕಂಪ್ಲಿ ವೃತ್ತ ಪೊಲೀಸ್ ಠಾಣೆಯ ಪಿಐ ಕೆ.ಬಿ.ವಾಸುಕುಮಾರ್, ನೀರಾವರಿ ನಿಗಮದ ಉಪ ವಿಭಾಗದ ಎಇಇ ಎ.ಶ್ರೀನಿವಾಸ್, ತಾಲೂಕು ಪಂಚಾಯಿತಿ ಇಒ ಆರ್.ಕೆ.ಶ್ರೀಕುಮಾರ್, ಕುರುಗೋಡು ಬಿಇಒ ಟಿ.ಎಂ.ಸಿದ್ದಲಿಂಗಮೂರ್ತಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಸತ್ಯ ಅರುಣೋದಯ ಸೇವಾ ಸಮಿತಿ ಅಧ್ಯಕ್ಷ ಡಿ.ವಿ.ಸತ್ಯನಾರಾಯಣ, ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್, ಕ.ಕಾ.ನಿ.ಪ.ಸಂಘದ ಜಿಲ್ಲಾ ಕಾರ್ಯದರ್ಶಿ ದ್ಯಾಮನಗೌಡ ಪಾಟೀಲ್, ಜಿಲ್ಲಾ ಸಮಿತಿ ಸದಸ್ಯ ಜಿ.ಚಂದ್ರಶೇಖ ರಗೌಡ ಆಗಮಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪಿ.ವೀರೇಶ್ ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















