ಬಳ್ಳಾರಿ / ಕಂಪ್ಲಿ: ಸರ್ಕಾರದ ವಿವಿಧ ಯೋಜನೆಗಳನ್ನು, ಸೌಲಭ್ಯಗಳನ್ನು ಅರಿತುಕೊಂಡು, ಅವುಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು (ಎಸ್ ಸಿ,ಎಸ್ ಟಿ) ಸರ್ವಾಂಗೀಣ ಅಭಿವೃದ್ಧಿಯನ್ನು ಒಂದಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಸಮಿತಿಯ ಸದಸ್ಯರಾದ ಎಂ ರಾಜಾಭಕ್ಷಿ ತಿಳಿಸಿದರು. ಅವರು ನಂ 10 ಮುದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕಣವಿ ತಿಮ್ಮಲಾಪುರ ಗ್ರಾಮದಲ್ಲಿ ಏಪೇಡಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಪರಿಶಿಷ್ಟರ ಕಾಲೋನಿಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಿದೆ. ಕುಡಿಯುವ ನೀರು, ವಸತಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಗುತ್ತಿದೆ.ಶಿಕ್ಷಣ ಸೌಲಭ್ಯ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಯತ್ತ ಸಾಗಬೇಕು ಎಂದರು.
ಸರ್ಕಾರದ ಪಂಚ ಗ್ಯಾರಂಡಿ, ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಮತದಾರರ ಸೇರ್ಪಡೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಶಿಲ್ಪರಾಣಿ, ಆಡಳಿತಾಧಿಕಾರಿ ಎಂ.ನಾರಾಯಣಸ್ವಾಮಿ, ಗ್ರಾ.ಪಂ.ಮಾಜಿ ಸದಸ್ಯ ಆರ್.ಎಂ.ರಾಮಯ್ಯ, ವೆಂಕಟೇಶ್ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















