ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗು ಜಿಲ್ಲಾ ಕರವೇ ವತಿಯಿಂದ ಶಾಲಾಮಕ್ಕಳಿಗೆ ಕನ್ನಡ ಭಾಷಣ ಸ್ಪರ್ಧೆ ಹಾಗೂ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

ಕುಶಾಲನಗರ : ಕೂಡಿಗೆ ಆಂಗ್ಲ ಮಾಧ್ಯಮ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಕನ್ನಡ ಭಾಷಣ ಸ್ಪರ್ಧೆಯನ್ನು ಕೊಡಗು ಕರವೇ ವತಿಯಿಂದ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಭಾರತಿಯವರು ವಹಿಸಿದ್ದರು.
ಶಾಲೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಕುದುಪಜೆ ಅವರು ಕುಶಾಲನಗರ ತಾಲೂಕು ಅಧ್ಯಕ್ಷರಾದ ಶ್ರೀಯುತ ಅಣ್ಣಯ್ಯನವರು ಹಾಗೂ ಮಹಿಳಾ ಅಧ್ಯಕ್ಷರಾದ ರೂಪ ಹಾನಗಲ್ ರವರು ಶಾಲು ಫಲ ಪುಷ್ಪ ಅರ್ಪಿಸಿ ಗೌರವಿಸಿ ಸನ್ಮಾನಿಸಿದರು‌.

ಈ ಸಂದರ್ಭ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರೌಢಶಾಲಾ ಮಕ್ಕಳಿಗೆ ವಿದ್ಯಾರ್ಥಿಗಳಾಗಿ ಕನ್ನಡಕ್ಕೆ ನಮ್ಮ ಸಂಕಲ್ಪ ಎಂಬ ವಿಷಯವಾಗಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ಭಾಷಣ ಸ್ಪರ್ಧೆಯಲ್ಲಿ ಕುಮಾರಿ ಪ್ರಕೃತಿ ಎಸ್ ಪಿ. ಪ್ರಥಮ ಸ್ಥಾನ ,ದ್ವಿತೀಯ ಸ್ಥಾನ ಸಾನ್ವಿ ಪೂವಮ್ಮ ಹಾಗೂ ಕುಮಾರಿ ಜೀವಿತ ತೃತೀಯ ಸ್ಥಾನ ಪಡೆದು ವಿಜೇತರಾದರು.
ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೆನಪಿನ ಕಾಣಿಕೆ ಹಾಗೂ ಬಹುಮಾನವನ್ನು ವಿತರಿಸಲಾಯಿತು. ಹತ್ತು ವರ್ಷಗಳಿಂದ ನಿರಂತರವಾಗಿ ಶಾಲೆ ಮತ್ತು ಶಾಲಾ ಆವರಣವನ್ನು ಶುಚಿಯಾಗಿರಿಸಿ ಶಾಲಾ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಂಡು ಬಂದ ಅಲ್ಲಿನ ಸ್ವಚ್ಛತಾ ಸಿಬ್ಬಂದಿಗಳಾದ ಶ್ರೀಮತಿ ಸುಧಾ
ಶ್ರೀಮತಿ ರಾಧಾ ಆರ್ ಮತ್ತು
ಶ್ರೀ ಶಿವಕುಮಾರ್ ಅವರಿಗೆ ಶಾಲು, ಪೇಟ ಹಾಗೂ ಫಲ ಅರ್ಪಿಸಿ ಅವರನ್ನು ಗೌರವಿಸಲಾಯಿತು.

ಸಭೆಯಲ್ಲಿ ಕೊಡಗು ಜಿಲ್ಲಾ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಕುದುಪಜೆ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ ಜಿಲ್ಲಾ ಉಪಾಧ್ಯಕ್ಷರಾದ ರಾಜೇಶ್, ಜಿಲ್ಲಾ ಸಂಚಾಲಕರಾದ ಗೋವಿಂದರಾಜ್ ದಾಸ್ ,ಟೈಲರ್ಸ್ ಘಟಕದ ಅಧ್ಯಕ್ಷರಾದ ಶ್ರೀ ಕೃಷ್ಣರವರು, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ಪೂರ್ಣಿಮಾ ,ತಾಲೂಕು ಅಧ್ಯಕ್ಷರಾದ ಅಣ್ಣಯ್ಯ ,ಮಹಿಳಾ ತಾಲೂಕು ಅಧ್ಯಕ್ಷರಾದ ರೂಪ ಹಾನಗಲ್, ತಾಲೂಕು ಗೌರವ ಅಧ್ಯಕ್ಷರಾದ ಧನರಾಜ್ ರವರು, ಖಜಾಂಜಿಗಳಾದ ರೊನಾಲ್ಡರವರು, ಕಾರ್ಯದರ್ಶಿಗಳಾದ ರಾಕೇಶ್, ಹೋಬಳಿ ಅಧ್ಯಕ್ಷರಾದ ಶ್ರೀಮತಿ ಗೀತಾ ರಾಜೇಶ್, ಶ್ರೀಮತಿ ಪುಷ್ಪ ಶ್ರೀಮತಿ ಯಶೋಧ ಹಾಜರಿದ್ದರು.. ಶಿಕ್ಷಕಿಯವರಾದ ಶ್ರೀಮತಿ ಅಮೃತ ರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!