ಸೇಡಂ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ವಿದ್ಯಾರ್ಥಿಗಳ ಹೋರಾಟ ಮತ್ತು ಪ್ರಜಾಪ್ರಭುತ್ವದ ಒತ್ತಡಕ್ಕೆ ದೊರೆತ ನೈತಿಕ ಗೆಲುವಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕ ಅಧ್ಯಕ್ಷರು ಹಾಗೂ ವಕೀಲರಾದ ಗೋಪಾಲ ಎಲ್ ನಾಟೆಕಾರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ದೇಶದ ಶಿಕ್ಷಣ ವ್ಯವಸ್ಥೆಯ ಹೊಣೆ ಹೊತ್ತಿದ್ದ ಸಚಿವರು ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವುದು ಅಧಿಕಾರಕ್ಕಿಂತ ವಿದ್ಯಾರ್ಥಿಗಳ ಭವಿಷ್ಯವೆ ಮುಖ್ಯ ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಾಗ ಆದರ ನೈತಿಕತೆ ಹಾಗೂ ಆಡಳಿತಾತ್ಮಕ ಹೊಣೆಗಾರಿಕೆಯನ್ನು ಸಂಬಂಧಿಸಿದ ಸಚಿವರು ಹೊರುವುದು ಪ್ರಜಾಪ್ರಭುತ್ವದ ಜವಾಬ್ದಾರಿಯಾಗಿದೆ. ಬಡವರು ದಲಿತರು ಹಿಂದುಳಿದವರು ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಕಾಲ ಶ್ರಮಪಟ್ಟು ಪರೀಕ್ಷೆಗಳಿಗೆ ಸಿದ್ದರಾಗುತ್ತಾರೆ ಇಂತಹ ಸಂಧರ್ಭದಲ್ಲಿ ಪರೀಕ್ಷಾ ಆಕ್ರಮಗಳು ಅವರ ಪರಿಶ್ರಮ, ಸಮಯ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಬೇಕು.
ಸಚಿವರ ರಾಜೀನಾಮೆ ಒಂದು ಅಂತ್ಯವಲ್ಲ; ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗೆ ಇದು ಆರಂಭವಾಗಬೇಕು ಗೋಪಾಲ ಎಲ್ ನಾಟೆಕಾರ್ ಆಗ್ರಹಿಸಿದ್ದಾರೆ. ಹೋರಾಟ, ವಿದ್ಯಾರ್ಥಿಗಳ ಯುವಜನತೆಯ ಧ್ವನಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಎಲ್ಲರೂ ಒಂದಾಗಿ ನಿಲ್ಲಬೇಕೆಂದು ಹೇಳಿದ್ದಾರೆ.
- ಕರುನಾಡ ಕಂದ ಸುದ್ದಿ




















