ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಳೆಗಾಗಿ ಪ್ರಾರ್ಥಿಸಿ ಅಖಂಡ ಭಜನೆ ಹಾಗೂ ಹೋಮ ಹವನ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಸಣಾಪುರ ಗ್ರಾಮದ ಆರಾಧ್ಯ ದೇವರಾದ ಲಿಂಗರೂಪಿ ಶ್ರೀ ಉದ್ಬವ ವೀರಭದ್ರೇಶ್ವರ ದೇಗುದಲ್ಲಿ 24 ಗಂಟೆಗಳ ಕಾಲ ಅಖಂಡ ಭಜನೆ ಕಾರ್ಯಕ್ರಮ ಹಾಗೂ ಹೋಮ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಜು.26 ರಂದು ಶ್ರೀ ಉದ್ಬವ ವೀರಭದ್ರೇಶ್ವರ ಸ್ವಾಮಿಗೆ ವಿವಿಧ ಅಭೀಷೇಕಗಳನ್ನು ಮಾಡಿದ ನಂತರ ಸಣಾಪುರ ಗ್ರಾಮದ ಶ್ರೀ ವೀರಭದ್ರೇಶ್ವರ ಭಜನಾ ಮಂಡಳಿಯ ಸದಸ್ಯರು 24 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
24 ಗಂಟೆಗಳ ನಿರಂತರ ಭಜನಾ ಕಾರ್ಯಕ್ರಮದಲ್ಲಿ ಮೂರು ಗ್ರಾಮಗಳಾದ ಸಣಾಪುರ,ಗುತ್ತಿಗನೂರು ಮತ್ತು ಮುಸ್ಟೂರು ಗ್ರಾಮದ ಭಜನಾ ಮಂಡಳಿಗಳು ಭಾಗವಹಿಸಿದ್ದು, ಜು.26 ರಂದು ಬೆಳಿಗಿನಿಂದ 27ರ ಸೋಮವಾರ ಬೆಳಗಿನ 6 ಗಂಟೆಯರವರೆಗೆ ನಿರಂತರವಾಗಿ ಒಂದೂರಾದ ನಂತರ ಒಂದು ಊರಿನವರು ಭಕೆನ ಕಾರ್ಯಕ್ರಮ ನಡೆಸಲಿದ್ದಾರೆ.
ಜು.27 ರಂದು ಸೋಮವಾರ ಭಜನೆ ಕಾರ್ಯಕ್ರಮ ಮುಗಿದ ನಂತರ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳನ್ನು ಮಾಡಿದ ನಂತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳಿಂದ, ವಿವಿಧ ಹೂಗಳಿಂದ ಅಲಂಕರಿಸಿ ಪೂಜಿಸಿದರು.
ನಂತರ ದೇವಸ್ಥಾನದ ಆವರಣದಲ್ಲಿ ವಿವಿಧ ಹೋಮ ಹವನಗಳು ಜರುಗಲಿವೆ. ನಂತರ ಮಹಾಮಂಗಳಾರತಿ ನೆರವೇರಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ. ನಂತರ ಮಹಾ ಪ್ರಸಾದ ವಿತರಣೆ ಜರುಗಲಿದೆ. ಇಂದಿನ ಅಖಂಡ ಭಜನಾ ಕಾರ್ಯಕ್ರಮದಲ್ಲಿ ದೇಗುಲ ಸಮಿತಿಯ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಸದ್ಭಕ್ತರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!