ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Tiger Day: ಅಂತರಾಷ್ಟ್ರೀಯ ಹುಲಿ ದಿನ.. ಈ ದಿನದ ಆಚರಣೆ ಏಕೆ? ಇದರ ಮಹತ್ವ

ವಿಶೇಷ ಲೇಖನ : ಜಿಲಾನಸಾಬ್ ಬಡಿಗೇರ್

ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಹುಲಿ ಗಂಭೀರವಾದ ಮತ್ತು ಭವ್ಯವಾದ ಪ್ರಾಣಿ. ಇತ್ತಿಚಿನ ದಿನಗಳಲ್ಲಿ ಅಳುವಿನಂಚಿನತ್ತ ಹುಲಿಯ ಸಂತತಿಯು ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

ಇಂದು ಜುಲೈ 29 ಅಂತರಾಷ್ಟ್ರೀಯ ಹುಲಿ ದಿನ. ಆಹಾರ ಸರಪಣಿಯಲ್ಲೂ ಹುಲಿ ಅತ್ಯಂತ ಪ್ರಮುಖ ಸ್ಥಾನದಲ್ಲಿದೆ. ಆದರೆ ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ನಡೆಸಲಾಗುವ ಕೆಲವೊಂದು ಕಾರ್ಯಗಳಿಂದ ಹುಲಿಯ ಸಂತತಿ ಕ್ಷೀಣಿಸಲು ಕಾರಣವಾಗುತ್ತಿದೆ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಹುಲಿ ಗಂಭೀರವಾದ ಮತ್ತು ಭವ್ಯವಾದ ಪ್ರಾಣಿ. ಇತ್ತಿಚಿನ ದಿನಗಳಲ್ಲಿ ಅಳುವಿನಂಚಿನತ್ತ ಹುಲಿಯ ಸಂತತಿಯು ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

ಅಕ್ರಮವಾಗಿ ನಡೆಸುತ್ತಿರುವ ವನ್ಯಜೀವಿಗಳ ವ್ಯಾಪಾರ, ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹಾಗೂ ಕಾಡಿನ ನಾಶದಿಂದಾಗಿ ಹುಲಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜಗತ್ತಿನ ಕೇವಲ 13 ರಾಷ್ಟ್ರಗಳಲ್ಲಿ ಮಾತ್ರ ಹುಲಿಗಳು ಕಂಡುಬರುತ್ತವೆ. ಈ ಹಿನ್ನಲೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ.

​ಅಂತರಾಷ್ಟ್ರೀಯ ಹುಲಿ ದಿನ ಆಚರಣೆ ಹಿನ್ನಲೆ :

​ಅಂತರಾಷ್ಟ್ರೀಯ ಹುಲಿ ದಿನ ಆಚರಣೆ ಹಿನ್ನಲೆ
ಹುಲಿ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಹುಲಿಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2010ರ ಜುಲೈ 29ರಂದು ಮೊದಲ ಬಾರಿಗೆ ಅಂತರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್‌ನಲ್ಲಿ ಆಚರಿಸಲಾಯಿತು. ಈ ದಿನದಂದು ಹುಲಿ ಸಂರಕ್ಷಣೆ ಕುರಿತು ಚರ್ಚೆ, ಉಪನ್ಯಾಸ, ಜಾಥಾ, ವಿಚಾರ ಸಂಕಿರಣ ಹಾಗೂ ಛಾಯಚಿತ್ರ ಪ್ರದರ್ಶನ ಮೂಲಕ ಹುಲಿ ಭೇಟೆ, ಹುಲಿಗಳ ರಕ್ಷಣೆಯ ಕುರಿತಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಇಂದಿನ ದಿನಗಳಲ್ಲಿ ಹುಲಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಮತ್ತು ಹುಲಿ ಸಂರಕ್ಷಣೆಯನ್ನು ಉತ್ತೇಜಿಸುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.

​ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ :

​ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ
ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. 2018ರ ಹುಲಿ ಗಣತಿ ಪ್ರಕಾರ ದೇಶದಲ್ಲಿ 2967 ಹುಲಿಗಳು ಇವೆ. ಈ ಮೂಲಕ ಜಗತ್ತಿನಲ್ಲಿ ಸಂತತಿಗೆ ಅತ್ಯಂತ ಸುರಕ್ಷಿತ ಸ್ಥಳ ಭಾರತವಾಗಿದೆ. 2018ರ ಹುಲಿ ಗಣತಿ ಗೆ 1400 ಕ್ಯಾಮೆರಾ ಟ್ರ್ಯಾಪ್‌ಗಳನ್ನು ಬಳಸಲಾಗಿತ್ತು. ಪ್ರಪಂಚದ 13 ದೇಶಗಳ ಕಾಡಿನಲ್ಲಿ ಮಾತ್ರ ಹುಲಿಗಳನ್ನು ನಾವು ಕಾಣಬಹುದಾಗಿದೆ. ವಿಶ್ವದಲ್ಲೇ ಅತಿಹೆಚ್ಚು ಹುಲಿಗಳು ಇರುವುದು ಅದು ಏಷ್ಯಾಖಂಡದಲ್ಲೇ. 2006 ರಿಂದ ಹುಲಿಗಳ ಗಣತಿಯನ್ನು ಮಾಡಲಾಗುತ್ತದೆ. ಈ ಪ್ರಕ್ರಿಯೆ ನಾಲ್ಕು ವರ್ಷಕ್ಕೊಮ್ಮೆ ವೈಜ್ಞಾನಿಕ ರೀತಿಯಲ್ಲಿ ನಡೆಯುತ್ತದೆ. 2006, 2010, 2014 ಹಾಗೂ 2018ರಲ್ಲಿ ಗಣತಿ ಆಗಿದೆ. ನಾಲ್ಕು ವರ್ಷಗಳಿಗೆ ಹೋಲಿಸಿದರೆ ಹುಲಿಗಳ ಸಂಖ್ಯೆಯಲ್ಲಿ ಶೇ. 33ರಷ್ಟು ಹೆಚ್ಚಳವಾಗಿದೆ.

​ಮಧ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು :

​ಮಧ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು
2018ರ ಗಣತಿ ಪ್ರಕಾರ ಮಧ್ಯಪ್ರದೇಶದಲ್ಲಿ 526 ಹುಲಿಗಳಿದ್ದು, ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 524 ಹುಲಿಗಳಿದ್ದು, ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲಿ 442 ಹುಲಿಗಳಿದ್ದು ಮೂರನೇ ಸ್ಥಾನದಲ್ಲಿದೆ. 2014ರಲ್ಲಿ ಕರ್ನಾಟಕ ರಾಜ್ಯದಲ್ಲಿ 406 ಹುಲಿಗಳಿದ್ದವು.

​ಗಣತಿಯನ್ನ ಹೇಗೆ ಮಾಡಲಾಗುತ್ತದೆ? :

​ಗಣತಿಯನ್ನ ಹೇಗೆ ಮಾಡಲಾಗುತ್ತದೆ?
ಹುಲಿ ಗಣತಿಯನ್ನು ನಾಲ್ಕು ವಿಧಾನದಲ್ಲಿ ನಡೆಸಲಾಗುತ್ತದೆ. ಮೊದಲ ಎರಡು ಹಂತದಲ್ಲಿ ಹುಲಿ ಇರುವಿಕೆಯ ಚಿಹ್ನೆ, ಸ್ಕ್ಯಾ‌ಟ್‌ ಮತ್ತು ಪಗ್‌ ಮಾರ್ಕ್ ಮೂಲಕ ಗುರುತಿಸಲಾಗುತ್ತದೆ. ಮೂರನೇ ಹಂತದಲ್ಲಿ ಜಿಐಎಸ್‌ ಅಪ್ಲಿಕೇಶನ್‌ನೊಂದಿಗೆ ಸಿದ್ಧಪಡಿಸಿದ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಬಳಸಿ ಎಣಿಸಲಾಗುತ್ತದೆ. ಕೊನೆ ಹಂತದಲ್ಲಿ ಕ್ಯಾಮೆರಾ ಹಾಕದ ಪ್ರದೇಶದಲ್ಲಿ ಸರ್ವೇ ಕಾರ್ಯ ನಡೆಸಿ ದತ್ತಾಂಶ ಕಲೆ ಹಾಕಲಾಗುತ್ತದೆ.

​ಹುಲಿಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು? :

​ಹುಲಿಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು?
ಹುಲಿಗಳ ಸಂಖ್ಯೆ ಹೆಚ್ಚಾಗಲು ಮುಖ್ಯ ಕಾರಣ, ಅರಣ್ಯ ಇಲಾಖೆಯ ಜಾಗರೂಕತೆ ಹಾಗೂ ಸಂರಕ್ಷಣೆಯ ಪ್ರಯತ್ನಗಳು ಹುಲಿ ಸಂಖ್ಯೆ ಹೆಚ್ಚಾಗಲು ಒಂದು ಕಾರಣ. ಜತೆಗೆ ಕಳ್ಳ ಬೇಟೆ ಕಡಿಮೆ ಆಗಿದ್ದು, ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೆಚ್ಚು ಮಾಡಲಾಗಿದೆ. ನ್ಯಾಷನಲ್‌ ಟೈಗರ್‌ ಕನ್ಜರ್‌ವೇಷನ್‌ ಅಥಾರಿಟಿ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಸ್ಥಾಪನೆಯಾಗಿದ್ದು ಪ್ರಯೋಜನಕಾರಿಯಾಗಿದೆ.

​ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ :

​ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ
ದೇಶದಲ್ಲಿ ಹುಲಿಗಳ ಸಂರಕ್ಷಣೆಗಾಗಿ 1973ರಲ್ಲಿ ಪ್ರಾಜೆಕ್ಟ್ ಟೈಗರ್‌ ಅಸ್ತಿತ್ವಕ್ಕೆ ಬಂತು. ನಂತರ ಇದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವಾಗಿ ಬದಲಾಗಿ ಹುಲಿಗಳ ಉಳಿವಿಗಾಗಿ ಕೆಲಸ ಮಾಡುತ್ತಿದೆ. ಸ್ಪೆಷಲ್‌ ಟೈಗರ್‌ ಪ್ರೊಟೆಕ್ಷನ್‌ ಫೋರ್ಸ್‌ ದೇಶದಲ್ಲೇ ಮೊದಲ ಬಾರಿಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಜಾರಿಗೆ ತರಲಾಗಿದೆ.

​ಕರ್ನಾಟಕದ ಹುಲಿ ಸಂರಕ್ಷಿತ 5 ಪ್ರದೇಶ :

​ಕರ್ನಾಟಕದ ಹುಲಿ ಸಂರಕ್ಷಿತ 5 ಪ್ರದೇಶ
ಕರ್ನಾಟಕದ ಹುಲಿ ಸಂರಕ್ಷಿತ 5 ಪ್ರದೇಶಗಳು-ಬಂಡೀಪುರ, ನಾಗರಹೊಳೆ, ಬಿಆರ್‌ಟಿ, ಭದ್ರಾ ಹಾಗೂ ಕಾಳಿ.

​ಹುಲಿ ಸಂರಕ್ಷಣೆಯಾದರೆ ಕಾಡು ಸಮೃದ್ಧ :

​ಹುಲಿ ಸಂರಕ್ಷಣೆಯಾದರೆ ಕಾಡು ಸಮೃದ್ಧ
ಹುಲಿ ಸಂರಕ್ಷಣೆಯಾದರೆ ಕಾಡು ಚೆನ್ನಾಗಿರುತ್ತದೆ. ಪ್ರಾಕೃತಿಕ ಸಮತೋಲನಕ್ಕೂ ಇದು ಸಹಕಾರಿ. ಒಂದು ಕಾಡಿನಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದೆ ಎಂದರೆ ಆ ಕಾಡು ಸಮೃದ್ಧವಾಗಿದೆ ಎಂದರ್ಥ ಎನ್ನುತ್ತಾರೆ ವನ್ಯಜೀವಿ ತಜ್ಞರು. ಹುಲಿ ಇರುವ ಜಾಗದಲ್ಲಿ ಪಕ್ಷಿ, ಕೀಟ, ಕಾಡು ಪ್ರಾಣಿಗಳು ಹೇರಳವಾಗಿರುತ್ತವೆ. ಬಯೋ ಸಿಸ್ಟಂ ಕೂಡ ಉತ್ತಮವಾಗಿರುತ್ತದೆ.

ಕೊನೆಯದಾಗಿ, ಹುಲಿಗಳ ರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ, ಅದು ನಮ್ಮೆಲ್ಲರ ಕರ್ತವ್ಯವಾಗಿದೆ. ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸೋಣ, ಕಾಡುಗಳನ್ನು ಉಳಿಸೋಣ ಮತ್ತು ಹುಲಿಗಳು ಕಾಡಿನಲ್ಲಿ ಮುಕ್ತವಾಗಿ ಘರ್ಜಿಸುವಂತೆ ವಾತಾವರಣ ನಿರ್ಮಿಸೋಣ. “ಹುಲಿ ಉಳಿಸಿ, ಕಾಡು ಬೆಳೆಸಿ, ಪರಿಸರ ಸಂರಕ್ಷಿಸಿ” ಎಂದು ಹೇಳುತ್ತಾ ನನ್ನ ಲೇಖನಕ್ಕೆ ವಿರಾಮ…

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!