ಬಳ್ಳಾರಿ / ಕಂಪ್ಲಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಮುಖಾಂಶಳು ದಿನಾಂಕ 28.07.2026ರ ಬೆಳಿಗ್ಗೆ ಸುಮಾರು 11:00 ಗಂಟೆಗೆ ತಾಲೂಕಿನ ಮೇಟ್ರಿ ಗ್ರಾಮದ ಪ್ರಮುಖ ವ್ಯಕ್ತಿಗಳು ಪಿರ್ಯಾಧಿದಾರರು (ದೂರುದಾರರು) ಮತ್ತು ಅವರ ಸ್ನೇಹಿತ ಗಂಗಾ ನೀಡಿದ ದೂರಿನ ಪ್ರಕಾರ ಸಿಂಧನೂರಿನಿಂದ ಅನಂತಪುರದ ಕಡೆಗೆ ವಿವಿಧ ಕಂಪನಿಗಳ ಗೂಡ್ಸ್ ವಾಹನಗಳಲ್ಲಿ ಜಾನುವಾರುಗಳನ್ನು ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ದೂರುದಾರರು ತಕ್ಷಣ 112 ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಪ್ರಮುಖ ಆರೋಪಗಳು : ವಾಹನದ ಚಾಲಕರು ದೂರುದಾರರಿಗೆ ಹಣದ ಆಮಿಷ ಒಡ್ಡಿದ್ದಾರೆ.ಗೂಡ್ಸ್ ವಾಹನದ ಇಕ್ಕಟ್ಟಾದ ಸ್ಥಳದಲ್ಲಿ ನಾಲ್ಕು ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಲಾಗಿತ್ತು. ಜಾನುವಾರುಗಳನ್ನು ಕಸಾಯಿಕಾನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಠಾಣೆ ಮತ್ತು ಗುನ್ನೆ ನಂಬರ್ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ: 113/2026 ರಡಿಯಲ್ಲಿ ಕೇಸ್ ದಾಖಲಾಗಿದೆ.ಇದು ಜಾನುವಾರುಗಳ ಅಕ್ರಮ ಸಾಗಣೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್




















