ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ ಶ್ರೀ ಸಿದ್ಧಾರೂಢರ ಕಥಾಮೃತ ಪುರಾಣ ಪ್ರಾರಂಭ

ಬಾಗಲಕೋಟೆ/ ಮುಧೋಳ : ಶ್ರಾವಣ ಮಾಸದ ತನ್ನಿಮಿತ್ಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಗುರುವಾರ ದಿ. 13 ರಂದು ಸಂಜೆ 7:30 ಗಂಟೆಗೆ ಕಾಮಧೇನು ಕಲ್ಪಧೃಮ ಶ್ರೀ ಸಿದ್ಧಾರೂಢರ ಕಥಾಮೃತ ಪ್ರಾರಂಭಗೊಳ್ಳಲಿದೆ ಎಂದು ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಯುವ ಮುಖಂಡ ಶ್ರೀನಿವಾಸ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡುತ್ತಾ ಒಂದು ತಿಂಗಳ ಪರ್ಯಂತರ ಶ್ರೀಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅವರಿಂದ ಪುರಾಣ ಕಾರ್ಯಕ್ರಮ ನಡೆಯಲಿದೆ.
ಪುರಾಣದ ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ಪೂಜ್ಯರಾದ ಮಹಾಲಿಂಗಯ್ಯ ಸ್ವಾಮಿ ಹಿರೇಮಠ ಹಾಗೂ ಸಿದ್ದಯ್ಯ ಸ್ವಾಮಿ ಹಿರೇಮಠ ವಹಿಸುವರು. ಶ್ರೀ ಮಹಾಳಿಂಗೇಶ್ವರ ದೇವರ ಅರ್ಚಕರಾದ ಕುಮಾರ್ ಗುರುಪ್ರಸಾದ್ ಸ್ವಾಮೀಜಿಯವರ ಸಮ್ಮುಖದಲ್ಲಿ ಹಿರಿಯ ಜನಪದ ಕಲಾವಿದೆ ಶ್ರೀಮತಿ ಮುತ್ತವ ಲಕ್ಷ್ಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಿರಿಯರಾದ ಮಲ್ಲು ಮುಚ್ಚಂಡಿ ಅವರು ಉದ್ಘಾಟಿಸಲಿದ್ದು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಪರಮಾನಂದ ಸುಣಗಾರ ಜ್ಯೋತಿಯನ್ನು ಬೆಳಗಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 6 ರಿಂದ 7 ರವರೆಗೆ ಪ್ರವಚನವು ನಡೆಯಲಿದೆ ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!