ಕುಶಾಲನಗರ: ಕೂಡುಮಂಗಳೂರಿನಲ್ಲಿ ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ, ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಶನ್ ನ ಕುಶಾಲನಗರ ತಾಲೂಕು ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಕೊಡ್ಲಿಪೇಟೆಯಲ್ಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗುವಂತೆ ವಸತಿ ಶಾಲೆ ನಿರ್ಮಾಣಕ್ಕೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಕೂಲಿ ಕಾರ್ಮಿಕರು ದೇಶದ ಬೆನ್ನೆಲುಬು. ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆ ಅಗತ್ಯ. ಕಾರ್ಮಿಕರು ಕೆಲಸ ನಿರ್ವಹಣೆ ಸಂದರ್ಭ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಶ್ರಮಿಕರು ಕಡ್ಡಾಯವಾಗಿ ಇ ಶ್ರಮ್ ಕಾರ್ಡ್ ಹೊಂದುವುದು ಅಗತ್ಯ. ಕನಿಷ್ಠ ವೇತನ ತಾರತಮ್ಯದ ಬಗ್ಗೆ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಕಾರ್ಮಿಕರು ಸರಕಾರದ ಸೌಲಭ್ಯಗಳನ್ನು, ತಮ್ಮ ಹಕ್ಕುಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದುವ ಅಗತ್ಯವಿದೆ ಎಂದರು.
ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಕಾರ್ಮಿಕರ ಕಲ್ಯಾಣಕ್ಕಾಗಿಯೇ ಇರುವ ನಿಧಿಗಳನ್ನು ಬಳಸಿಕೊಳ್ಳಲು ಸಂಘಟನೆಗಳು ಸದಸ್ಯರಿಗೆ ಮಾರ್ಗದರ್ಶನ ನೀಡಬೇಕಿದೆ. ಹೆಚ್ಚು ಸಂಘಗಳ ಸ್ಥಾಪನೆ ಬದಲು ಒಂದೇ ವೇದಿಕೆಯಡಿ ಎಲ್ಲರೂ ಕಾರ್ಯನಿರ್ವಹಿಸಿದಾಗ ಹಾದಿ ಸುಗಮವಾಗಲಿದೆ ಎಂದರು.
ಲ್ಯಾಂಪ್ಸ್ ಮಹಾಮಂಡಳಿ ಅಧ್ಯಕ್ಷ ಅರುಣ್ ರಾವ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ತ್ರಿನೇಶ್, ಫೆಡರೇಷನ್ ತುಮಕೂರು ಜಿಲ್ಲಾಧ್ಯಕ್ಷ ಗೋವಿಂದರಾಜು ಕುಶಾಲನಗರ ತಾಲ್ಲೂಕು ಸಂಘದ ಕಾರ್ಯಾಧ್ಯಕ್ಷ ಮಂಜು, ಅಧ್ಯಕ್ಷ ರಂಜಿತ್, ಪ್ರಧಾನ ಕಾರ್ಯದರ್ಶಿ ಧರ್ಮೇಶ್, ಖಜಾಂಚಿ ಪ್ರಕಾಶ ಹಾಗೂ ಪದಾಧಿಕಾರಿಗಳು ಇದ್ದರು.
ವರದಿ : ಪ್ರಿತುನ್ ಪೂವಣ್ಣ



















