
ಕೊಟ್ಟೂರು: ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯತಿ ಅವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ರಾಘವೇಂದ್ರ ಅಣಜಿ ಹಾಗೂ ಕಾರ್ಯದರ್ಶಿ ರೂಪಾ ರವರು ಡಾ. ಬಿ ಅರ್ ಅಂಬೇಡ್ಕರ್. ಮಹಾತ್ಮ ಗಾಂಧೀಜಿ ಸೇರಿದಂತೆ ನಾಡಿನ ಗಣ್ಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ 80ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.
ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸಿದ್ಲಿಲಿಂಗಸ್ವಾಮಿ ರವರು ಸಿಹಿ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು,
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು,
ಕರೀಲಿಂಗೇಶ್ವರ ಪ್ರೌಢ ಶಾಲೆಯ ಮುಖ್ಯ ಗುರುಗಳು.ಶಿಕ್ಷಕ ವರ್ಗದವರು. ಮಕ್ಕಳು ಹಾಗೂ ಕೆ. ಅಯ್ಯನಹಳ್ಳಿ ಕರೀಲಿಂಗೇಶ್ವರ ಆಂಗ್ಲ ಸರಕಾರಿ ಶಾಲೆಯ ಮುಖ್ಯ ಗುರುಗಳು ಶಿಕ್ಷಕ ವರ್ಗದವರು. ಮಕ್ಕಳು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಕೆ. ಗೋಣೆಪ್ಪ




















