ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಕಲ ಚೇತನರಿಗೆ ಸಾಧನಾ ಸಲಕರಣೆ ವಿತರಣೆ

ಚಿತ್ರದುರ್ಗ : ಜಿಲ್ಲೆ ಹೊಸದುರ್ಗ ನಗರದ ತಾಲೂಕು ಪಂಚಾಯಿತಿಯಲ್ಲಿ ಸುಮಾರು 19 ವರ್ಷಗಳಿಂದ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಫಯಾಜ್ ಅಹ್ಮದ್ ಬಿನ್ ಕಲಂದರ್ಸಾಬ್ ಎಂ ಆರ್ ಡಬ್ಲ್ಯೂ ಇವರಿಗೆ ಸರ್ಕಾರಿ ಸೇವೆ ಹಾಗೂ ಸಮಾಜ ಸೇವೆಗಳಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನೋತ್ಸವದಂದು ಸ್ಮರಣ ಸಂಚಿಕೆ ಹಾಗೂ ಗೌರವಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಿ ಜಿ ಗೋವಿಂದಪ್ಪ ನವರು ತಹಸೀಲ್ದಾರ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳು, ಗ್ಯಾರೆಂಟಿ ಯೋಜನೆಯ ಅಧ್ಯಕ್ಷರಾದ ಸ್ಮೈಲ್ ಮುಂತಾದವರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಬಗೆಯ ವಿಶೇಷ ಚೇತನರಿಗೆ ಒಂದು ಲಕ್ಷ ರೂಪಾಯಿ ಮುಖಬೆಲೆಯ ಪವರ್ ವೀಲ್ ಚೇರ್ ಹೊಲಿಗೆ ಯಂತ್ರಗಳು ಟಾಕಿಂಗ್ ಲ್ಯಾಪ್ ಟಾಪ್ ಬ್ರೈಲ್ ಗಳನ್ನು ವಿತರಿಸಲಾಯಿತು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!